Advertisement

ಹ್ಯಾರಿಸ್‌ ಪುತ್ರನ ಹಲ್ಲೆ ಪ್ರಕರಣ: ರಾಜ್ಯಪಾಲರಿಗೆ ಬಿಜೆಪಿ ದೂರು

04:19 PM Feb 22, 2018 | Team Udayavani |

ಬೆಂಗಳೂರು : ಶಾಸಕ ಎನ್‌ ಎ ಹ್ಯಾರಿಸ್‌ಪುತ್ರನಿಂದ ನಡೆದಿರುವ  ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಡಿಸಿಎಂ ಆರ್‌ ಅಶೋಕ್‌ ನೇತೃತ್ವದಲ್ಲಿ ಇಂದು ಗುರುವಾರ ಬಿಜೆಪಿ ನಿಯೋಗ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜೂಭಾಯಿ  ವಾಲಾಗೆ ದೂರು ನೀಡಿದರು.

Advertisement

ಬೆಂಗಳೂರಿನಲ್ಲಿ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ; ಜನರಿಗೆ ರಕ್ಷಣೆಯೇ ಇಲ್ಲವಾಗಿದೆ; ಕಾಂಗ್ರೆಸ್‌ ನಾಯಕರ ಗೂಂಡಾಗಿರಿ ಹೆಚ್ಚುತ್ತಿದೆ ಎಂದು ದೂರಿರುವ ಬಿಜೆಪಿ ನಿಯೋಗ, ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹಿಸಿದೆ. 

ಈ ನಡುವೆ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಮಾರಣಾಂತಿಕ ಹಲ್ಲೆಗೆ ಗುರಿಯಾಗಿರುವ ವಿದ್ವತ್‌ ರನ್ನು ಕಾಣಲು ಹಲವು ಗಣ್ಯರು ಆಸ್ಪತ್ರೆಗೆ ತೆರಳಿದರು. ನಟ ಶಿವರಾಜ್‌ ಕುಮಾರ್‌ ಕೂಡ ಗಣ್ಯರಲ್ಲಿ ಒಬ್ಬರಾಗಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next