Advertisement

ಶಾಸಕ ಇಕ್ಬಾಲ್‌ ಅನ್ಸಾರಿ ವಜಾಕ್ಕೆ ಆಗ್ರಹ

04:19 PM Feb 03, 2018 | Team Udayavani |

ದೇವದುರ್ಗ: ಸಂವಿಧಾನಕ್ಕೆ ಅಪಚಾರವೆಸಗಿ ಸಮಾಜದ ಶಾಂತಿ ಭಂಗವುಂಟು ಮಾಡುತ್ತಿರುವ ಗಂಗಾವತಿ ಶಾಸಕ ಇಕ್ಬಾಲ್‌ ಅನ್ಸಾರಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಹಿಂದು ಜಾಗರಣ ವೇದಿಕೆ ಪದಾಧಿಕಾರಿಗಳು ಕಂದಾಯ ಅಧಿಕಾರಿ ರಾಮನಗೌಡ ಅವರಿಗೆ ಮನವಿ ಸಲ್ಲಿಸಿದರು.

Advertisement

ಶಾಸಕ ಇಕ್ಬಾಲ್‌ ಅನ್ಸಾರಿ ತಮ್ಮ ಸ್ಥಾನದ ಘನತೆ ಮರೆತು ಮತಿಹೀನರಂತೆ ವರ್ತಿಸುತ್ತಾ ಸಂವಿಧಾನದ ಆಶಯಕ್ಕೆ ಭಂಗ ಉಂಟು ಮಾಡುತ್ತಿದ್ದಾರೆ. ಕೊಪ್ಪಳದಲ್ಲಿ ಜರುಗಿದ ಅಲ್ಪಸಂಖ್ಯಾತರ ಹಕ್ಕು ರಕ್ಷಣಾ ಸಭೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. 

ರಾಮನ ಭಕ್ತರು ಲೂಟಿಕೋರರು, ಕೊಲೆಗಡುಕರು, ಮನೆಯಲ್ಲಿ ರಾಮನ ಪೂಜೆ ಮಾಡುತ್ತಾರೆ. ರಾಮನ ಹೆಸರಿನಲ್ಲಿ ಕೊಲೆ ಮಾಡುತ್ತಾರೆ ಎಂಬ ಹೇಳಿಕೆ ನೀಡಿ ಸಮಾಜದ ಶಾಂತಿ ಕದಡಿದ್ದಾರೆ ಎಂದು ದೂರಿದರು. ಜವಾಬ್ದಾರಿ ಸ್ಥಾನದಲ್ಲಿರುವ ಶಾಸಕರು ಬೇಜವಾಬ್ದಾರಿ ಹೇಳಿಕೆ ನೀಡಿ ಸಂವಿಧಾನಕ್ಕೆ ಅಪಚಾರ ಎಸಗಿದ್ದಾರೆ. 

ಅಧಿಕಾರ ದುರುಪಯೋಗ ಪಡಿಸಿಕೊಂಡು ಹಿಂದೂ, ಮುಸ್ಲಿಮರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ತೊಂದರೆ ನೀಡುತ್ತಿದ್ದಾರೆ.  ಶಾಸಕರ ಪ್ರಚೋದನಾತ್ಮಕ ಹೇಳಿಕೆ ಹಾಗೂ ವರ್ತನೆಯಿಂದ ಗಂಗಾವತಿ ತಾಲೂಕಿನಾದ್ಯಾಂತ ಕೋಮು ಗಲಭೆಗಳು ಹೆಚ್ಚಿವೆ. ಅವರನ್ನು ಕೂಡಲೇ ಶಾಸಕ ಸ್ಥಾನದಿಂದ ವಜಾಗೊಳಿಸಬೇಕು. ಅವರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು. ಇಲ್ಲವಾದರೆ ಸಂಘಟನೆಯಿಂದ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಾರ್ತಿಕ, ಶಿವುಕುಮಾರ, ಅನೀಲ್‌, ನಿರಂಜನ ಮೂರ್ತಿ, ಆನಂದ, ರಾಜ ಗೌಳಿ, ಕಿರಣಕುಮಾರ, ಭರತಕುಮಾರ, ಅಮರ, ವಿಶ್ವನಾಥ, ನಾಗರಾಜ, ಚನ್ನಬಸವ ಕೋರಿ, ಸಂಗಮೇಶ, ಮುದ್ದುರಾಜ, ಗುರುನಾಥ, ಅಂಬರೀಷ ಇತರರು ಇದ್ದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next