Advertisement

ಸಚಿವ ಸತೀಶ ಕಾರಿನಲ್ಲಿ ಬಂದ ಶಾಸಕ ಕುಮಠಳ್ಳಿ 

12:30 AM Feb 17, 2019 | |

ಬೆಳಗಾವಿ: ಅತೃಪ್ತರಾಗಿದ್ದುಕೊಂಡು ರಮೇಶ ಜಾರಕಿಹೊಳಿ ಅವರೊಂದಿಗೆ ಗುರುತಿಸಿಕೊಂಡು ಮಾಧ್ಯಮದವರ ಕಣ್ತಪ್ಪಿಸಿ ಓಡಾಡುತ್ತಿದ್ದ ಅಥಣಿ ಕ್ಷೇತ್ರದ ಶಾಸಕ ಮಹೇಶ ಕುಮಠಳ್ಳಿ ಅವರು ಶನಿವಾರ ಸಚಿವ ಸತೀಶ ಜಾರಕಿಹೊಳಿಯೊಂದಿಗೆ ಕಂಡು ಬಂದು ಅಚ್ಚರಿ ಮೂಡಿಸಿದರು.

Advertisement

ಸ್ಮಾರ್ಟ್‌ ಸಿಟಿ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವ ಸತೀಶ ಜಾರಕಿಹೊಳಿ ಕಾರಿನಲ್ಲಿ ಶಾಸಕ ಕುಮಠಳ್ಳಿ ಕೂಡ ಇದ್ದರು.

ಸಚಿವರೊಂದಿಗೆ ಅತ್ತಿಂದಿತ್ತ ಓಡಾಡಿ, ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಅವರ ಕಾರಿನಲ್ಲಿಯೇ ವಾಪಸ್ಸಾಗಿದ್ದು, ಚರ್ಚೆಗೆ ಗ್ರಾಸವಾಯಿತು. ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ, ರಾಜ್ಯದಲ್ಲಿ ಆಪರೇಷನ್‌ ಕಮಲ ಠುಸ್ಸಾಗಿದೆ. ಗೋಕಾಕ ಶಾಸಕ, ಸಹೋದರ ರಮೇಶ ಜಾರಕಿಹೊಳಿ ಸೇರಿ ಎಲ್ಲ ಶಾಸಕರು ನಮ್ಮೊಂದಿಗೆ ಇದ್ದಾರೆ. ವರಿಷ್ಠರನ್ನು ಭೇಟಿಯಾಗಿರುವ ರಮೇಶ ಅವರಿಗೆ ಸಚಿವ ಸ್ಥಾನ ಕೊಡುವುದು, ಬಿಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next