Advertisement

ಇತಿಹಾಸ ತಿಳಿದು ಮಾತಾಡಲಿ: ಲಕ್ಷ್ಮೀ

04:13 PM Feb 15, 2021 | Team Udayavani |

ಬೆಳಗಾವಿ: ದೇಶಕ್ಕೆ ಉದ್ಯೋಗ ಖಾತ್ರಿ ಯೋಜನೆ ಕೊಡುಗೆ ನೀಡಿದ್ದು, ಕಾಂಗ್ರೆಸ್‌ ಸರ್ಕಾರ. ಮನಮೋಹನ್‌ ಸಿಂಗ್‌ ಪ್ರಧಾನಿ ಆಗಿದ್ದಾಗ ಯೋಜನೆ ಜಾರಿಗೆ ತಂದಿದ್ದರು. ಆಗ ಬಿಜೆಪಿಯವರು ವಿರೋಧಿಸಿದ್ದರು. ವಿಧಾನ ಪರಿಷತ್‌ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಇತಿಹಾಸ ಅರಿತು ಮಾತನಾಡಲಿ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ತಿರುಗೇಟು ನೀಡಿದರು.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ಉದ್ಯೋಗ ಖಾತ್ರಿ ಯೋಜನೆ ಶಾಸಕರದ್ದಲ್ಲ. ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಕವಟಗಿಮಠ ಹೇಳಿದ್ದಾರೆ. ಉದ್ಯೋಗ ಖಾತ್ರಿ ಯೋಜನೆ ನಾನು ತಂದಿದ್ದೇನೆ ಎಂದು ಎಲ್ಲಿಯೂ ಹೇಳಿಲ್ಲ. ಯೋಜನೆಯನ್ನು ತಂದ ಕೀರ್ತಿ ಕಾಂಗ್ರೆಸ್‌ನದ್ದು. ಅದನ್ನು ಕ್ಷೇತ್ರದಲ್ಲಿ ಸಮರ್ಪಕವಾಗಿ ಜಾರಿಗೊಳಿಸುವ ಕೆಲಸವನ್ನು ಶಾಸಕಿಯಾಗಿ ಮಾಡುತ್ತಿದ್ದೇನೆ. ಕವಟಗಿಮಠ ಜವಾಬ್ದಾರಿಯಿಂದ ಮಾತನಾಡುವುದನ್ನು ಕಲಿಯಲಿ ಎಂದು ಹೆಬ್ಟಾಳಕರ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next