Advertisement

ಶಾಸಕರಿಂದ ರಸ್ತೆ ಕಾಮಗಾರಿ ಪರಿಶೀಲನೆ

07:35 PM Feb 24, 2021 | Team Udayavani |

ಆಲ್ದೂರು: ಪಟ್ಟಣದಲ್ಲಿ ನಡೆಯುತ್ತಿರುವ ರಸ್ತೆ ಡಾಂಬರೀಕರಣವನ್ನು ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಪರಿಶೀಲಿಸಿದರು.

Advertisement

ಆಲ್ದೂರು ಪಟ್ಟಣದಿಂದ ಹಾಂದಿಯವರೆಗೆ ಶಾಸಕರ ಅನುದಾನದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ  ರಸ್ತೆ ಡಾಂಬರೀಕರಣ ನಡೆಯುತ್ತಿದೆ. ಶಾಸಕರು ಕಾಮಗಾರಿ ಪರಿಶೀಲಿಸಿ ಮಾತನಾಡಿ, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಬೇಕು. ಸಾವಿರಾರು ವಾಹನಗಳು ಪ್ರತಿನಿತ್ಯ ಈ ರಸ್ತೆಯಲ್ಲಿ ಸಂಚರಿಸುತ್ತವೆ. ನಾನು ಈ ಹಿಂದೆ ಶಾಸಕನಾಗಿದ್ದ ಅವಧಿಯಲ್ಲಿ ರಸ್ತೆ ಡಾಂಬರೀಕರಣ ನಡೆದಿದ್ದು. ಮತ್ತೆ ನಾನೇ ಈ ಬಾರಿ ನನ್ನ ಅನುದಾನದಲ್ಲಿ ಅಭಿವೃದ್ಧಿ ಮಾಡುತ್ತಿದ್ದೇನೆ.ಸಾರ್ವಜನಿಕರು ರಸ್ತೆ ಕಾಮಗಾರಿ ಬಗ್ಗೆ ಗಮನ ಹರಿಸಿ ಕಳಪೆ ಕೆಲಸ ಆಗದಂತೆ ನೋಡಿಕೊಳ್ಳಬೇಕು ಎಂದರು.

ಮಂಡಲದ ಅಧ್ಯಕ್ಷ ದಿನೇಶ್‌,ಜಿಲ್ಲಾ ಕಾರ್ಯದರ್ಶಿ ಸಂಪತ್‌, ಒಬಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ  ನಾರಾಯಣ ಆಚಾರ್ಯ, ರಾಜ್ಯ ರೈತ ಮೋರ್ಚಾ ಸದಸ್ಯ ಕವೀಶ್‌, ಹೋಬಳಿ ಅಧ್ಯಕ್ಷ ಸುದರ್ಶನ್‌, ದೇವರಹಳ್ಳಿ ಅರುಣ್‌, ನಾಗೇಶ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next