Advertisement

ಮಾನವೀಯತೆ ಮೆರೆದ ರೇಣುಕಾಚಾರ್ಯ

06:31 PM Mar 03, 2021 | Team Udayavani |

ಹೊನ್ನಾಳಿ: ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದ ಅಂಗವಿಕಲ ಬಾಲಕನೊಬ್ಬನಿಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಸ್ಪಂದಿಸಿ ವೈಯಕ್ತಿಕ ಧನ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

Advertisement

ಚನ್ನಗಿರಿ ತಾಲೂಕಿನ ದಾಗಿನಕಟ್ಟೆ ಗ್ರಾಮದ ಅಂಗವಿಕಲ ಬಾಲಕ ಹೊನ್ನಾಳಿ ಹೊನ್ನಾಳಿ ಪಟ್ಟಣದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸಿ ಖಾಸಗಿ ಬಸ್‌ ನಿಲ್ದಾಣದ ಬಳಿಯ ಹೋಟೆಲ್‌ ಒಂದರಲ್ಲಿ ಉಪಹಾರ ಸೇವನೆ ಮಾಡುತ್ತಿದ್ದರು. ಇದೇ ಸಮಯಕ್ಕೆ ಶಾಸಕ ಎಂ.ಪಿ. ರೇಣುಕಾಚಾರ್ಯ ತಮ್ಮ ಕಾರ್ಯಕರ್ತರೊಂದಿಗೆ ಟೀ ಕುಡಿಯಲು ಆಗಮಿಸಿದರು. ಕಾಲಿಲ್ಲದ ಹಾಗೂ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕನ ಸ್ಥಿತಿ ಕಂಡು ಮರುಗಿದ ಶಾಸಕರು, ಬಾಲಕನ ಸ್ಥಿತಿಗತಿ ಬಗ್ಗೆ ವಿಚಾರಿಸಿ ಪೋಷಕರಿಗೆ ಧೈರ್ಯ ತುಂಬಿದರು. ಅಲ್ಲದೇ ತಮ್ಮ ಜೇಬಿನಲ್ಲಿದ್ದ ಹಣವನ್ನು ನೀಡಿ ಮಾನವೀಯತೆ ಮೆರೆದರು.

Advertisement

Udayavani is now on Telegram. Click here to join our channel and stay updated with the latest news.

Next