Advertisement

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

11:38 PM Sep 18, 2024 | Team Udayavani |

ಬೆಂಗಳೂರು: ಜಾತಿ ನಿಂದನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರಕ್ಕೆ ಆದೇಶ ಕಾಯ್ದಿರಿಸಿದೆ.

Advertisement

ವಿಚಾರಣೆ ವೇಳೆ ಮುನಿರತ್ನ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕರಾದ ಪ್ರದೀಪ್‌ ಕುಮಾರ್‌ ಆಕ್ಷೇಪಣೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಾದ ಮಂಡಿಸಿದ ಮುನಿರತ್ನ ಪರ ವಕೀಲ ಅಶೋಕ್‌ ಹಾರನಹಳ್ಳಿ, ಇದು ಆರೇಳು ವರ್ಷದ ಹಳೆಯ ಪ್ರಕರಣ. ಚಲುವರಾಜು ಉಪಸ್ಥಿತಿಯಲ್ಲಿ ಆದ ಘಟನೆ. ಸಾರ್ವಜನಿಕರ ಮುಂದೆ ನಡೆದ ಘಟನೆ ಅಲ್ಲ ಎಂದು ವಾದಿಸಿದರು. ಬಳಿಕ ವಾದ-ಪ್ರತಿವಾದ ಆಲಿಸಿದ ಕೋರ್ಟ್‌ ಗುರುವಾರಕ್ಕೆ ಆದೇಶ ಕಾಯ್ದಿರಿಸಿದೆ.

ಇದೇ ವೇಳೆ ಚಲುವರಾಜು ದಾಖಲಿಸಿರುವ ದೂರಿನ ಸಂಬಂಧ ನಿರೀಕ್ಷಣ ಜಾಮೀನು ಕೋರಿ ಮುನಿರತ್ನ ಪರ ವಕೀಲರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್‌, ನಿರೀಕ್ಷಣ ಜಾಮೀನು ಮಂಜೂರು ಮಾಡಿ ಜಾತಿ ನಿಂದನೆ ಪ್ರಕರಣದಲ್ಲಿ ಗುರುವಾರ ಆದೇಶ ಕಾಯ್ದಿರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next