Advertisement

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

01:58 PM Sep 20, 2024 | Team Udayavani |

ಹುಬ್ಬಳ್ಳಿ: ಶಾಸಕ ಮುನಿರತ್ನ ನಾಯ್ಡು ಮಾಡಿರುವುದು ಜನಪ್ರತಿನಿಧಿಗಳೆಲ್ಲರೂ ತಲೆತಗ್ಗಿಸುವಂತಹ ವಿಚಾರವಾಗಿದೆ. ಪಕ್ಷದವರಿಗೆ ನೈತಿಕತೆ ಇದ್ದರೆ ಅವರನ್ನು ಕೂಡಲೇ ಹೊರಹಾಕಬೇಕು ಎಂದು ಶಾಸಕ ಪ್ರಸಾದ ಅಬ್ಬಯ್ಯ ಒತ್ತಾಯಿಸಿದರು.

Advertisement

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್‌ಐವಿ ಇಂಜೆಕ್ಷನ್ ಮಾಡಲು ಪ್ರಯತ್ನಿಸಿದ ಆರೋಪದಲ್ಲಿರುವ ಶಾಸಕ ಮುನಿರತ್ನ ಅವರು ಜನಪ್ರತಿನಿಧಿಗಳಾಗಿ ಮುಂದುವರೆಯಲು ಯೋಗ್ಯವಲ್ಲ. ಅವರೊಬ್ಬ ನಾಲಾಯಕ್, ಅಯೋಗ್ಯರು ಎಂದು ಹರಿಹಾಯ್ದರು.

ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಕಾನೂನು-ಸುವ್ಯವಸ್ಥೆ ಸುಭದ್ರವಾಗಿದೆ. ವಿನಾಕಾರಣ ಬಿಜೆಪಿಯವರು ಕುಮ್ಮಕ್ಕು ನೀಡಿ ಹಿಂದೂ-ಮುಸ್ಲಿಂ ವಿಚಾರ ತರುತ್ತಿದ್ದಾರೆ. ಅವರಿಗೆ ಅಭಿವೃದ್ಧಿ ಕಾರ್ಯಗಳು ಬೇಕಾಗಿಲ್ಲ. ಕೆಲಸ ಮಾಡುವ ಸರ್ಕಾರಗಳು ಬೇಕಾಗಿಲ್ಲ. ರಾಜ್ಯದಲ್ಲಿ ನಡೆಯುವ ಸಣ್ಣಪುಟ್ಟ ವಿಚಾರಗಳನ್ನು ದೊಡ್ಡದಾಗಿ ಬಿಂಬಿಸುತ್ತಿದ್ದಾರೆ. ಏನಾದರೂ ಮಾಡಿ ರಾಜ್ಯ ಸರ್ಕಾರದ ಹೆಸರನ್ನು ಕೆಡಿಸುವ ಪ್ರಯತ್ನದಲ್ಲಿದ್ದಾರೆ. ಆದರೆ ಈ ಯಾವುದಕ್ಕೂ ಆಸ್ಪದ ಕೊಡದೇ ಸರ್ಕಾರವು ಕಾನೂನು-ಸುವ್ಯವಸ್ಥೆ ಕಾಪಾಡುತ್ತಿದೆ ಎಂದರು.

ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರನ್ನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಅವರು ಕೂಡ ನನಗೆ ಅಬ್ದುಲ್ ನೋ? ಅಬ್ಬಯ್ಯ ನೋ ಎಂದು ಏಕವಚನದಲ್ಲಿ ಮಾತನಾಡಿದ್ದಾರೆ. ಮೊದಲು ಅವರು ಕ್ಷಮೆ ಯೋಚನೆ ಮಾಡಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next