Advertisement

ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿ ನಿರಂಜನ್ ಕುಮಾರ್ ನೇಮಕ

08:53 AM Jul 28, 2020 | keerthan |

ಚಾಮರಾಜನಗರ: ಗುಂಡ್ಲುಪೇಟೆ ಶಾಸಕ ಸಿ.ಎಸ್. ನಿರಂಜನ ಕುಮಾರ್ ಅವರನ್ನು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ (ಕೆಎಸ್‌ಎಫ್‌ಐಸಿ) ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ನಿರಂಜನ್ ಅವರು ಪ್ರಸ್ತುತ ವಿಧಾನಸಭೆಗೆ ಶಾಸಕರಾಗಿ ಪ್ರಥಮ ಬಾರಿಗೆ ಆರಿಸಿ ಬಂದಿದ್ದಾರೆ. ಜಿಲ್ಲೆಯ ಏಕೈಕ ಬಿಜೆಪಿ ಶಾಸಕರಾಗಿದ್ದಾರೆ. ಮೊದಲ ಪ್ರವೇಶದಲ್ಲೇ ನಿಗಮದ ಅಧ್ಯಕ್ಷರಾಗಿರುವುದು ವಿಶೇಷವಾಗಿದೆ.

ಕೆಎಸ್‌ಎಫ್‌ಐಸಿ ಅಧ್ಯಕ್ಷರಾಗಿ ನೇಮಕಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ನಿರಂಜನ್, ಮುಖ್ಯಮಂತ್ರಿಯವರು ಜವಾಬ್ದಾರಿಯುತ ಸ್ಥಾನವನ್ನು ನೀಡಿದ್ದಾರೆ. ಅವರಿಗೂ, ಪಕ್ಷಕ್ಕೂ, ಬಿಜೆಪಿ ರಾಜ್ಯಾಧ್ಯಕ್ಷರಿಗೂ ನನ್ನನ್ನು ಚುನಾಯಿಸಿದ ಗುಂಡ್ಲುಪೇಟೆ ಕ್ಷೇತ್ರದ ಜನತೆಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಎಲ್ಲರ ಮಾರ್ಗದರ್ಶನ ಪಡೆದು ಗುಂಡ್ಲುಪೇಟೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next