Advertisement

ಪೋಸ್ಟರ್‌ನಲ್ಲಿ ಶಾಸಕ ಬಿಜೆಪಿಗೆ ಮುಜುಗರ

11:17 AM Nov 11, 2017 | Team Udayavani |

ಬೆಂಗಳೂರು: ರಾಜ್ಯಾದ್ಯಂತ ಬಿಜೆಪಿ ಟಿಪ್ಪು ಜಯಂತಿ ವಿರೋಧಿಸುತ್ತಿದ್ದರೆ, ನಗರದ ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ಟಿಪ್ಪು ಜಯಂತಿ ಪೋಸ್ಟರ್‌ ಹಾಗೂ ಬ್ಯಾನರ್‌ಗಳಲ್ಲಿ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ರಾರಾಜಿಸುತ್ತಿರುವುದು ಬಿಜೆಪಿ ನಾಯಕರಿಗೆ ಮುಜುಗರ ಉಂಟು ಮಾಡಿದೆ.

Advertisement

ತಕ್ಷಣ ಆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸತೀಶ್‌ರೆಡ್ಡಿ, ತಮಗೂ ಆ ಬ್ಯಾನರ್‌ಗಳಿಗೂ ಸಂಬಂಧವಿಲ್ಲ. ಫೋಟೋ ಹಾಕುವ ಮುನ್ನ ನನ್ನ ಅನುಮತಿ ಪಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬೊಮ್ಮನಹಳ್ಳಿಯಲ್ಲಿ ಟಿಪ್ಪು ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸತೀಶ್‌ ರೆಡ್ಡಿ ಬೆಂಬಲಿಗರು ಹಾಕಿದ್ದ ಪೋಸ್ಟರ್‌ಗಳಲ್ಲಿ ಸತೀಶ್‌ ರೆಡ್ಡಿ ಚಿತ್ರವಿತ್ತು. ಇದು ಸಾಮಾಜಿಕ ಜಾಲ ತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

ಬಿಜೆಪಿ ಟಿಪ್ಪು ಜಯಂತಿ ವಿರೋಧಿಸುತ್ತಿದ್ದರೆ ಆ ಪಕ್ಷದ ಶಾಸಕರು ಟಿಪ್ಪು ಜಯಂತಿ ಪೋಸ್ಟರ್‌ಗಳಲ್ಲಿ ತಮ್ಮ ಫೋಟೋ ಹಾಕಿಕೊಂಡಿದ್ದಾರೆ. ಇದು ದ್ವಂದ್ವವಲ್ಲವೇ ಎಂದು ಪ್ರಶ್ನೆಗಳು ಕೇಳಿ ಬಂದಿದ್ದವು.

“ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ತಮ್ಮ ಬೆಂಬಲಿಗರು ಈ ಭಾವಚಿತ್ರ ಹಾಕಿರಬಹುದು. ಆದರೆ, ಟಿಪ್ಪು ಜಯಂತಿಗೆ ಸಂಬಂಧಿಸಿದಂತೆ ಪಕ್ಷದ ನಿಲುವಿಗೆ ನಾನು ಬದ್ಧ,’ ಎಂದು ಹೇಳುವ ಮೂಲಕ ಸತೀಶ್‌ ರೆಡ್ಡಿ ವಿವಾದಕ್ಕೆ ತೆರೆ ಎಳೆದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next