Advertisement

SSLC ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ ಧೈರ್ಯ ತುಂಬಿದ ಶಾಸಕ ಪರಣ್ಣ ಮುನವಳ್ಳಿ

04:55 PM Jun 27, 2020 | keerthan |

ಗಂಗಾವತಿ: ಧೈರ್ಯ ಮತ್ತು ಜಾಗೃತಿಯಿಂದ ಪರೀಕ್ಷೆ ಎದುರಿಸುವಂತೆ ಮಕ್ಕಳಿಗೆ ಶಾಸಕ ಪರಣ್ಣ ಮುನವಳ್ಳಿ ಧೈರ್ಯ ತುಂಬಿದರು. ಅವರು ನಗರದ ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷೆ ಬರೆಯುವ ಮಕ್ಕಳಿಗೆ ಧೈರ್ಯ ತುಂಬಿ ಮಾತನಾಡಿದರು.

Advertisement

ಕೋವಿಡ್-19 ರೋಗ ಹರಡದಂತೆ ಲಾಕ್ ಡೌನ್ ಸಂದರ್ಭದಲ್ಲಿ ಮುಂದೂಡಲ್ಪಟ್ಟ ಪರೀಕ್ಷೆ ಈಗ ನಡೆಯುತ್ತಿದೆ. ಶಿಕ್ಷಣ ಇಲಾಖೆ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳ ಭವಿಷ್ಯದ ಮಹತ್ವದ ಘಟ್ಟ ಎಸ್ಎಸ್ಎಲ್ ಸಿ ಪರೀಕ್ಷೆ ಆಗಿದೆ. ಮಕ್ಕಳು ಸಾಮಾಜಿಕ ಅಂತರ ಮಾಸ್ಕ್ ಬಳಸಿ ಆರೋಗ್ಯ ಜಾಗೃತಿಯಿಂದ ಪರೀಕ್ಷೆಗೆ ಹಾಜರಾಗಬೇಕು. ಗಂಗಾವತಿ ತಾಲೂಕಿನಲ್ಲಿ ಪರೀಕ್ಷೆಯನ್ನು ಯಶಸ್ವಿ ಆರೋಗ್ಯ ಆಯೋಜನೆ ಮಾಡಿರುವುದಕ್ಕೆ ಶಿಕ್ಷಣ ಸಚಿವ ಸುರೇಶಕುಮಾರ ಶ್ಲಾಘಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಇಒ ಸೋಮಶೇಖರ್ ಗೌಡ ಸೇರಿ ಅನೇಕರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next