Advertisement

ಅಳ್ಳಗಿ ಮುಖ್ಯ ಕಾಲುವೆಗೆ ಶಾಸಕ ಪಾಟೀಲ್‌ ಭೇಟಿ

11:51 AM Jan 25, 2022 | Team Udayavani |

ಅಫಜಲಪುರ: ತಾಲೂಕಿನ ಅಳ್ಳಗಿ(ಬಿ) ಮುಖ್ಯ ಕಾಲುವೆಗೆ ಶಾಸಕ ಎಂ.ವೈ. ಪಾಟೀಲ್‌ ಭೇಟಿ ನೀಡಿ ಅವ್ಯವಸ್ಥೆ ಕಂಡು ಗರಂ ಆದ ಘಟನೆ ಜರುಗಿದೆ.

Advertisement

ಅಳ್ಳಗಿ ಮುಖ್ಯ ಕಾಲುವೆಗೆ ಭೇಟಿ ನೀಡಿ ಮಾತನಾಡಿದ ಅವರು, ಭೀಮಾ ಏತ ನೀರಾವರಿ ಯೋಜನೆಗೆ ಆರಂಭದಲ್ಲಿ 80 ಕೋಟಿ ರೂ. ಮೀಸಲಿಡಲಾಗಿತ್ತು. ಅದು ಪೂರ್ತಿಯಾಗುವ ಹೊತ್ತಿಗೆ 900 ಕೋಟಿ ರೂ.ಖರ್ಚಾಗಿದೆ. ಇಷ್ಟು ದೊಡ್ಡ ಮೊತ್ತ ಖರ್ಚಾದರೂ ಕೂಡ ನಮ್ಮ ರೈತರ ಹೊಲಗಳಿಗೆ ಸಮರ್ಪಕವಾಗಿ ನೀರು ಹರಿದಿಲ್ಲ ಎನ್ನುವುದು ಬಹಳ ನೋವಿನ ಸಂಗತಿಯಾಗಿದೆ. ಈ ಅದ್ವಾನಕ್ಕೆ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣವಾಗಿದೆ ಎಂದು ಕಿಡಿ ಕಾರಿದರು.

ಭೀಮಾ ನದಿ ನಮ್ಮ ಜೀವನದಿಯಾಗಿದೆ, ರೈತರು ನದಿಯನ್ನು ನಂಬಿ ಜೀವನ ನಡೆಸುತ್ತಿದ್ದಾರೆ. ಆದ್ದರಿಂದ ಸರ್ಕಾರ ಈ ಯೋಜನೆಯನ್ನು ಸಮರ್ಪಕವಾಗಿ ಪೂರ್ಣಗೊಳಿಸಲು ಅನುದಾನ ನೀಡಬೇಕು, ಅಧಿಕಾರಿಗಳು ಬೇಜವಾಬ್ದಾರಿ ಬಿಟ್ಟು ಕೆಲಸ ಮಾಡಬೇಕು. ನೀರಾವರಿ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಸರ್ಕಾರ ಪರಿಹಾರ ಕೊಟ್ಟಿಲ್ಲ, ಶೀಘ್ರವೇ ರೈತರಿಗೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ರಮೇಶ ಪೂಜಾರಿ ಉಡಚಾಣ, ಶರಣು ಕುಂಬಾರ, ಬಸವರಾಜ ಪಾಟೀಲ್‌, ಎಇಇ ಮಲ್ಲಿಕಾರ್ಜುನ ಜಾಕಾ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next