Advertisement

ಬಜೆ ಅಣೆಕಟ್ಟಿಗೆ ಶಾಸಕ ರಘುಪತಿ ಭಟ್‌ ಭೇಟಿ

12:15 AM May 07, 2019 | Team Udayavani |

ಉಡುಪಿ: ಜಿಲ್ಲೆಯಲ್ಲಿ ನೀರಿನ ಅಭಾವ ಹೆಚ್ಚಾಗುತ್ತಿದ್ದು, ಜನರಿಗೆ ಯಾವುದೇ ತೊಂದರೆಯಾಗಬಾರದು ಎಂದು ಶಾಸಕ ಕೆ.ರಘುಪತಿ ಭಟ್‌ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಸೋಮವಾರ ಬಜೆ ಅಣೆಕಟ್ಟಿಗೆ ಭೇಟಿ ನೀಡಿ ಅವರು ಮಾತನಾಡಿದರು.
ಬಳಿಕ ಜಿÇÉಾಧಿಕಾರಿಗಳನ್ನು ಕೂಡ ಭೇಟಿ ಮಾಡಿದ ಶಾಸಕರು ನೀರಿನ ಸಮಸ್ಯೆಗೆ ಪರಿಹಾರ ನೀಡುವಂತೆ ಆಗ್ರಹಿಸಿದರು. ಇದಕ್ಕೆ ಸ್ಪಂದಿಸಿದ ಜಿÇÉಾಧಿಕಾರಿಗಳು ನಗರಾಡಳಿತದ ಮೂಲಕ ಪ್ರತೀ ವಾರ್ಡ್‌ಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವುದಾಗಿ ಹಾಗೂ ಬಜೆ ಅಣೆಕಟ್ಟಿನಲ್ಲಿ ಹೂಳೆತ್ತುವ ಕಾರ್ಯ ಮಾಡಲಾಗುವುದು ಎಂದರು.

ಈ ಸಂದರ್ಭ ನಗರಸಭಾ ಸದಸ್ಯರಾದ ಪ್ರಭಾಕರ ಪೂಜಾರಿ, ಬಾಲಕೃಷ್ಣ ಶೆಟ್ಟಿ ಕಕ್ಕುಂಜೆ, ಗಿರಿಧರ ಆಚಾರ್ಯ ಕರಂಬಳ್ಳಿ, ಗಿರೀಶ್‌ ಅಂಚನ್‌, ರಶ್ಮಿ ಚಿತ್ತರಂಜನ್‌ ಭಟ್‌, ಪ್ರಮುಖರಾದ ಚಿತ್ತರಂಜನ್‌, ಕಿಶೋರ್‌ ಕರಂಬಳ್ಳಿ, ದಿನಕರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next