Advertisement

ನಿಗದಿಗೊಂಡಿರುವ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಯಲು ಅವಕಾಶ ಕಲ್ಪಿಸಿ:ರಘುಪತಿ ಭಟ್ ಆಗ್ರಹ  

06:02 PM Apr 21, 2021 | Team Udayavani |

ಉಡುಪಿ : ನೈಟ್ ಕರ್ಫ್ಯೂ ಹಾಗೂ ವಾರಾಂತ್ಯದ ಲಾಕ್ ಡೌನ್ ನಿಂದ ಈಗಾಗಲೇ ನಿಗದಿಯಾಗಿರುವ ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ನಿರ್ದಿಷ್ಟ ಜನ ನಿಗದಿಪಡಿಸಿ ಕಾರ್ಯಕ್ರಮಗಳಿಗೆ ಅವಕಾಶ ಕಲ್ಪಿಸಬೇಕೆಂದು ಶಾಸಕ ರಘುಪತಿ ಭಟ್ ಆಗ್ರಹಿಸಿದ್ದಾರೆ.

Advertisement

ಬುಧವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಕೋವಿಡ್ – 19 2ನೇ ಅಲೆ ಹಿನ್ನೆಲೆಯಲ್ಲಿ ಸರ್ಕಾರ ಹೊಸ ಮಾರ್ಗಸೂಚಿಯನ್ನು ಜಾರಿಗೊಳಿಸಿದೆ. ಈ ಹೊಸ ಮಾರ್ಗಸೂಚಿಯಂತೆ ರಾಜ್ಯದಾದ್ಯಂತ ಶುಕ್ರವಾರ ರಾತ್ರಿ 9:00 ರಿಂದ ಸೋಮವಾರ ಬೆಳಿಗ್ಗೆ 6:00 ವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿರುವುದರಿಂದ ಈ ನಡುವಿನಲ್ಲಿ ಬರುವ ದಿನಗಳಲ್ಲಿ ಅದರಲ್ಲೂ ಭಾನುವಾರ ಮದುವೆ ಸೇರಿದಂತೆ ಹೆಚ್ಚಿನ ಇನ್ನಿತರ ಕಾರ್ಯಕ್ರಮಗಳು ಈಗಾಗಲೇ ನಿಗದಿಗೊಂಡಿರುತ್ತದೆ. ಈ ಕಾರ್ಯಕ್ರಮಗಳಿಗೆ ಅವಕಾಶ ಕಲ್ಪಿಸುವಂತೆ ಶಾಸಕ ರಘುಪತಿ ಭಟ್ ಅವರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಮದುವೆ ಸೇರಿದಂತೆ ಹಲವಾರು ಧಾರ್ಮಿಕ ಕಾರ್ಯಕ್ರಮಗಳು ನಿಗಧಿಗೊಂಡಿರುವುದರಿಂದ ಈ ಕಾರ್ಯಕ್ರಮಗಳು ಸ್ಥಗಿತಗೊಂಡರೆ ಜನ ಸಮಸ್ಯೆಗೊಳಗಾಗುತ್ತಾರೆ. ಆದ್ದರಿಂದ ಜಿಲ್ಲಾಡಳಿತವು ಕೋವಿಡ್ – 19 ಮುಂಜಾಗ್ರತಾ ಕ್ರಮಗಳೊಂದಿಗೆ 50 ಜನ ಮೀರದಂತೆ ಜನ ನಿಗದಿಪಡಿಸಿ ಹಾಗೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಪಾಸನ್ನು ಪಡೆಯುವಂತೆ ಸೂಚಿಸಿ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next