Advertisement

ಉಡುಪಿ-ಮಣಿಪಾಲದಲ್ಲಿ ರಾತ್ರಿ ಕರ್ಫ್ಯೂ ತೆಗೆಯುವಂತೆ ಶಾಸಕ ರಘುಪತಿ ಭಟ್ ಮನವಿ

06:00 PM Apr 09, 2021 | Team Udayavani |

ಉಡುಪಿ : ಧಾರ್ಮಿಕ ಕಾರ್ಯಕ್ರಮಗಳಿಗೆ ತಡೆ ಹಾಗೂ ಪುನಶ್ಚೇತನಗೊಳ್ಳುತ್ತಿರುವ ಆರ್ಥಿಕತೆಗೆ ಪೆಟ್ಟುಬೀಳುವ ಹಿನ್ನೆಲೆಯಲ್ಲಿ ಉಡುಪಿ ಮತ್ತು ಮಣಿಪಾಲಕ್ಕೆ ವಿಧಿಸಿರುವ ರಾತ್ರಿ ಕರ್ಫ್ಯೂ ಹಿಂಪಡೆಯುವಂತೆ ಶಾಸಕ ರಘುಪತಿ ಭಟ್ ಮಾನ್ಯ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದಾರೆ.

Advertisement

ನೈಟ್ ಕರ್ಫ್ಯೂ ಬಗ್ಗೆ ಮಾತನಾಡಿದ ಶಾಸಕರು, ಮಣಿಪಾಲ ಮತ್ತು ಉಡುಪಿಯಲ್ಲಿ ನೈಟ್ ಕರ್ಫ್ಯೂವನ್ನು ಹೊರತುಪಡಿಸಬೇಕು. ಈ ಭಾಗದಲ್ಲಿ  ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚೆಚ್ಚು ಧಾರ್ಮಿಕ ಕಾರ್ಯಕ್ರಮಗಳು ರಾತ್ರಿಯ ವೇಳೆ ನಡೆಯುತ್ತವೆ. ಈ ಕಾರಣದಿಂದ ನೈಟ್ ಕರ್ಫ್ಯೂ ಮಾಡಿದರೆ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದಿದ್ದಾರೆ.

ಈ ಸಮಯದಲ್ಲಿ ದೈವಾರಾಧನೆ, ಕೋಲ, ಯಕ್ಷಗಾನ ಕಾರ್ಯಕ್ರಮಗಳು ನಡೆಯುತ್ತವೆ. ಕಳೆದ ವರ್ಷ ಕೂಡ ಕೋವಿಡ್ ಕಾರಣದಿಂದ ಈ ಯಾವ ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯವಾಗಿಲ್ಲ. ಕೆಲವರು ಈಗಗಾಲೇ ಕೋಲ ಮತ್ತು ದೈವಾರಾಧನೆಗೆ ದಿನಾಂಕ ನಿಗದಿ ಮಾಡಿದ್ದಾರೆ. ಇವರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ಕಾರಣ ರಾತ್ರಿ ಕರ್ಫ್ಯೂವನ್ನು ಮಣಿಪಾಲ ಮತ್ತು ಉಡುಪಿಯಲ್ಲಿ ತೆರವು ಮಾಡಬೇಕೆಂದು ಶಾಸಕ ರಘುಪತಿ ಭಟ್ ಮಾನ್ಯ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next