Advertisement

ಮಾಜಿ ಸಚಿವ ರಾಮದಾಸ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

01:53 PM Oct 19, 2020 | keerthan |

ಮೈಸೂರು: ಕೃಷ್ಣರಾಜಪುರ ಕ್ಷೇತ್ರದ ಶಾಸಕ, ಮಾಜಿ ಸಚಿವ ರಾಮದಾಸ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಇಂದು ಮುಂಜಾನೆ 5 ಗಂಟೆ ಸುಮಾರಿಗೆ ರಾಮದಾಸ್ ಅವರಿಗೆ ತೀವ್ರ ಉಸಿರಾಟ ಸಮಸ್ಯೆ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ರಾಮದಾಸ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಕೆಲವು ದಿನಗಳಿಂದ ದಸರಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ರಾಮದಾಸ್ ಅವರನ್ನು ಮುಂಜಾಗ್ರತಾ ಕ್ರಮವಾಗಿ ಅವರನ್ನು ಕೋವಿಡ್ 19 ಟೆಸ್ಟ್ ಗೂ ಒಳಪಡಿಸಲಾಗಿದೆ.

ಇದನ್ನೂ ಓದಿ:ಚುನಾವಣೆಯಲ್ಲಿ ನಾನು ಸೋತರೆ ದೇಶ ತ್ಯಜಿಸಬೇಕಾದೀತು: ಡೊನಾಲ್ಡ್‌ ಟ್ರಂಪ್‌

Advertisement

Udayavani is now on Telegram. Click here to join our channel and stay updated with the latest news.

Next