Advertisement

ರಸ್ತೆ ಕಾಮಗಾರಿಗೆ ಶಾಸಕ ಚಾಲನೆ

12:34 PM Dec 04, 2019 | Team Udayavani |

ಅರಸೀಕೆರೆ: ತಾಲೂಕಿನ ಅಗ್ಗುಂದ ಗ್ರಾಮದ ಸಮೀಪದಲ್ಲಿರುವ ಅಮ್ಮನ ಹಟ್ಟಿ ಗಂಗಮಾಳಮ್ಮ ದೇವಿಯ ದೇವಸ್ಥಾನದ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದಾಗಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಹೇಳಿದರು.

Advertisement

ದೇವಾಲಯದ ಸುತ್ತ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಲಕ್ಷಾಂತರ ಭಕ್ತರ ಆರಾಧ್ಯ ದೇವಿ ವಾಗಿರುವ ಗಂಗಮಾಳಿಕಾ ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ದೃಷ್ಟಿಯಿಂದ ಗ್ರಾಮದ ರಸ್ತೆಗಳು ಹಾಗೂ ದೇವಾಲಯದ ಸುತ್ತಮುತ್ತಲಿನ ಪ್ರದೇಶವನ್ನು ಕಾಂಕ್ರೀಟ್‌ ರಸ್ತೆಯನ್ನಾಗಿ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಹೇಳಿದರು.

ದುಮ್ಮೇನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಜೇಯ ಮಾತನಾಡಿ, ಭಕ್ತ ಸಮೂಹದ ಸಹಕಾರದಿಂದ ಶ್ರೀ ಕ್ಷೇತ್ರವೂ ಅಭಿವೃದ್ಧಿ ಹೊಂದುತ್ತಿದೆ. ದೇವಾಲಯ ಅಭಿವೃದ್ಧಿ ಸಮಿತಿಯಿಂದ ದಾಸೋಹ ನಡೆಸಲಾಗುತ್ತಿದೆ ಎಂದರು.

ಭಕ್ತಾದಿಗಳು ತಂಗಲು ಯಾತ್ರಿ ನಿವಾಸ, ಸಭೆ ಸಮಾರಂಭಗಳನ್ನು ನಡೆಸಲು ಸಮುದಾಯ ಭವನ ಮೊದಲಾ ಮೂಲ ಸೌಕರ್ಯಗಳನ್ನು ಕ್ಷೇತ್ರದಲ್ಲಿ ಒದಗಿಸಲಾಗಿದೆ ಎಂದು ತಿಳಿಸಿದರು. ಮುಖಂಡರಾದ ಮಹಾಲಿಂಗಪ್ಪ, ಪೂಜಾರಪ್ಪ, ಶಿವಲಿಂಗಪ್ಪ, ಶೇಖರಪ್ಪ, ಪೀಯಣ್ಣ, ಶಂಕರಪ್ಪ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next