Advertisement

ರಾಜ್ಯ ರಾಜಕಾರಣಕ್ಕೆ ಬರಲು ಇನ್ನೂ ನಿರ್ಧರಿಸಿಲ್ಲ: ಸುಮಲತಾ

12:05 AM Mar 03, 2023 | Team Udayavani |

ಮದ್ದೂರು: ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದಿಂದ ತಮಗೆ ಆಹ್ವಾನವಿದ್ದು, ಎರಡೂ ಪಕ್ಷದ ನಾಯಕರು ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಸಂಸದೆ ಸುಮಲತಾ ತಿಳಿಸಿದರು.

Advertisement

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಸ್ಪರ್ಧಿಸುವ, ರಾಜಕೀಯ ಪಕ್ಷ ಸೇರುವ ಅಥವಾ ಸ್ವತಂತ್ರವಾಗಿ ಉಳಿಯುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸುವುದಾಗಿ ಹೇಳಿದರು.

ಚುನಾವಣೆಗೆ ನಿಲ್ಲಬೇಕೆಂಬುದು ಅಷ್ಟು ಸುಲಭದ ವಿಚಾರವಲ್ಲ. ತಾವು ನಿರ್ಧರಿಸಿಲ್ಲ. ಅದೊಂದು ದೊಡ್ಡ ನಿರ್ಧಾರವಾಗುತ್ತದೆ. ಚುನಾವಣೆಗೆ ಎಷ್ಟು ದಿನ ಇದೆ ಎನ್ನುವುದು ಮುಖ್ಯವಲ್ಲ. ಅಲ್ಲಿರುವ ಅನುಕೂಲಕರ ವಾತಾವರಣ ಎಷ್ಟಿದೆ ಎಂಬುದು ಮುಖ್ಯ. ಹೀಗಾಗಿ ರಾಜ್ಯ ರಾಜಕಾರಣಕ್ಕೆ ಬರುತ್ತೇನೆ ಎಂಬುದನ್ನು ಹೇಳಲು ಇದು ಸೂಕ್ತ ಸಮಯವಲ್ಲ ಎಂದರು. ದಶಪಥ ಹೆದ್ದಾರಿ ಉದ್ಘಾಟನೆಗೆ ಆಗಮಿಸುತ್ತಿರುವ ಪ್ರಧಾನಿ ಕಾರ್ಯಕ್ರಮದಲ್ಲಿ ತಾವು ಸಂಸದೆಯಾಗಿ ಭಾಗವಹಿಸಲಿದ್ದೇನೆ. ಕೆಲವು ವಿಚಾರಗಳಲ್ಲಿ ತಾನು ಬಿಜೆಪಿಗೆ ಬೆಂಬಲ ಸೂಚಿಸಿದ್ದೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next