Advertisement

KPSC ಕಚೇರಿ ಮುಂದೆ ಶಾಸಕ ಸುರೇಶ್‌ ಕುಮಾರ್‌ ಏಕಾಂಗಿ ಪ್ರತಿಭಟನೆ

11:31 PM Jan 30, 2024 | Pranav MS |

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದ ಪರೀಕ್ಷಾ ಫ‌ಲಿತಾಂಶ ಮತ್ತು ನೇಮಕಾತಿಯಲ್ಲಿ ವಿಳಂಬ ನೀತಿ ವಿರೋಧಿಸಿ ರಾಜಾಜಿನಗರ ಕ್ಷೇತ್ರದ ಶಾಸಕ ಎಸ್‌. ಸುರೇಶ್‌ ಕುಮಾರ್‌ ಕೆಪಿಎಸ್‌ಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

Advertisement

ಮಂಗಳವಾರ ಬೆಳಗ್ಗೆ ಕೆಪಿಎಸ್‌ಸಿ ಕಚೇರಿ ಬಳಿಯ ಪಾದಚಾರಿ ಮಾರ್ಗದಲ್ಲಿ ಏಕಾಂಗಿಯಾಗಿ ಕೂತು ಪ್ರತಿಭಟನೆ ಆರಂಭಿಸಿದ ಸುರೇಶ್‌ ಕುಮಾರ್‌, 2022ರಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ 436 ಹುದ್ದೆ ಗೆ ಅರ್ಜಿ ಆಹ್ವಾನಿಸಿ, 2023 ರ ಫೆಬ್ರವರಿಯಲ್ಲಿ ಆಯೋಗದಿಂದ ಪರೀಕ್ಷೆ ನಡೆಸಲಾಗಿತ್ತು. 2023 ಆ. 17 ರಂದು ತಾತ್ಕಾಲಿಕ ಪಟ್ಟಿ ಬಿಡುಗಡೆ ಮಾಡಿದ್ದರೂ ಇನ್ನೂ ಅಂತಿಮ ಪಟ್ಟಿ ಬಿಡುಗಡೆ ಮಾಡಿಲ್ಲ. ಇದರೊಂದಿಗೆ ಆಯೋಗದಲ್ಲಿ ಒಳ ಜಗಳ ಉಂಟಾಗಿದೆ ಎಂದು ಆರೋಪಿಸಿದ ಸುರೇಶ್‌ ಕುಮಾರ್‌, ಒಳ ಜಗಳ ಸಾಕು, ನ್ಯಾಯ ಬೇಕು’ ಎಂದು ಘೋಷಣೆ ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಸ್ಥಳಕ್ಕೆ ತೆರಳಿದ ವಿಧಾನಸೌಧ ಠಾಣೆ ಪೊಲೀಸರು ಶಾಸಕ ಸುರೇಶ್‌ ಕುಮಾರ್‌ ಅವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದುರು. ಬಳಿಕ ಠಾಣಾ ಜಾಮೀನು ನೀಡಿ ಕಳುಹಿಸಿದ್ದಾರೆ.

1,600 ಹುದ್ದೆಗಳ ಭರ್ತಿಗೆ ಪ್ರಸ್ತಾವನೆ
ಈ ಮಧ್ಯೆ 2023ರಲ್ಲಿ ವಿವಿಧ ಇಲಾಖೆಗಳ 1,600ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಆಯಾ ಇಲಾಖೆಗಳಿಂದ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆಗಳು ಸಲ್ಲಿಕೆಯಾಗಿದ್ದು, ಅವುಗಳು ಸದ್ಯ ಆಯೋಗದ ಪರಿಶೀಲನೆಯಲ್ಲಿದೆ. ಈ ಪೈಕಿ 400 ಪಶು ವೈದ್ಯಾಧಿಕಾರಿಗಳ ನೇಮಕಕ್ಕೆ ಪಶುಸಂಗೋಪನಾ ಇಲಾಖೆ ಕಳೆದ ವರ್ಷದ ಜೂನ್‌ನಲ್ಲಿ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ, ಈ ಹುದ್ದೆಗಳ ನೇಮಕಾತಿಗೆ ಹೈಕೋರ್ಟ್‌ ತಡೆ ಇದ್ದು, ಮಾಹಿತಿ ಕೋರಿ ಆಯೋಗ ಸರ್ಕಾರಕ್ಕೆ ಪತ್ರ ಬರೆದಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next