Advertisement

Udupi ಹಲವು ಬೇಡಿಕೆ ಈಡೇರಿಸಲು ರೈಲ್ವೇ ಸಚಿವರಿಗೆ ಶಾಸಕ ಯಶ್‌ಪಾಲ್‌ ಮನವಿ

11:57 PM Aug 15, 2024 | Team Udayavani |

ಉಡುಪಿ: ಇಂದ್ರಾಳಿ ರೈಲು ನಿಲ್ದಾಣಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸುವುದು ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಾಸಕ ಯಶ್‌ಪಾಲ್‌ ಎ.ಸುವರ್ಣ ಅವರು ರೈಲ್ವೇ ಹಾಗೂ ಜಲ ಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಉಡುಪಿಯ ಪ್ರವಾಸಿ ಮಂದಿರದಲ್ಲಿ ಮನವಿ ಸಲ್ಲಿಸಿದರು.

Advertisement

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಮೂಲಸೌಕರ್ಯ ಇಲ್ಲದಿರುವ ಬಗ್ಗೆ ಉದಯವಾಣಿಯಲ್ಲಿ ನಿರಂತರ ಪ್ರಕಟಗೊಂಡ ವರದಿಗಳ ಬಗ್ಗೆ ಶಾಸಕರು ಸಚಿವರು ಗಮನಕ್ಕೆ ತಂದರು.

ಅಮೃತ ಭಾರತ ಯೋಜನೆಯಡಿ ಆಯ್ಕೆಯಾದ ಈ ನಿಲ್ದಾಣದಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಶಾಸಕರು, ಶಿಕ್ಷಣ, ಧಾರ್ಮಿಕ, ಪ್ರವಾಸೋದ್ಯಮ, ಮೀನುಗಾರಿಕೆ ಕಾರಣಗಳಿಗಾಗಿ ದಿನಂಪ್ರತಿ ಸಾವಿರಾರು ಪ್ರಯಾಣಿಕರು ಅವಲಂಬಿಸಿರುವ ಇಂದ್ರಾಳಿ ನಿಲ್ದಾಣದಲ್ಲಿ ಹೆಚ್ಚುವರಿ ಭದ್ರತೆಗೆ ಅಗತ್ಯ ಪೊಲೀಸ್‌ ಸಿಬಂದಿಯನ್ನು ನಿಯೋಜಿಸುವಂತೆ ಸಚಿವರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next