Advertisement

ISIS ನಂಟಿರುವ ವ್ಯಕ್ತಿಯೊಂದಿಗೆ ವೇದಿಕೆ ಹಂಚಿಕೊಂಡ ಸಿದ್ದರಾಮಯ್ಯ: ಯತ್ನಾಳ್ ಆರೋಪ

08:23 PM Dec 06, 2023 | Team Udayavani |

ಬೆಳಗಾವಿ: ಹುಬ್ಬಳ್ಳಿಯ ಬಾಷಾ ಪೀರ್ ದರ್ಗಾ ಬಳಿ ಇತ್ತೀಚೆಗೆ ನಡೆದ ದಕ್ಷಿಣ ಭಾರತ ಮುಸ್ಲಿಂ ಧಾರ್ಮಿಕ ಮುಖಂಡರ ಸಮಾವೇಶದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಎಸ್ ಉಗ್ರರೊಂದಿಗೆ ನಂಟು ಹೊಂದಿರುವ ವ್ಯಕ್ತಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬುಧವಾರ ಆರೋಪಿಸಿದ್ದಾರೆ.

Advertisement

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಐಸಿಸ್ ಉಗ್ರರ ಸಂಪರ್ಕ ಹೊಂದಿರುವ ವ್ಯಕ್ತಿ ಡಿಸೆಂಬರ್ 4 ರಂದು ಹುಬ್ಬಳ್ಳಿ ನಗರದ ಬಾಷಾ ಪೀರ್ ದರ್ಗಾ ಬಳಿ ನಡೆದ ದಕ್ಷಿಣ ಭಾರತ ಮುಸ್ಲಿಂ ಧಾರ್ಮಿಕ ಮುಖಂಡರ ಸಮಾವೇಶದಲ್ಲಿ ಭಾಗವಹಿಸಿದ್ದರು.ಆ ವ್ಯಕ್ತಿ ಸಿಎಂ ಸಿದ್ದರಾಮಯ್ಯ ಅವರ ಪಕ್ಕದಲ್ಲೇ ಕುಳಿತಿದ್ದರು. ಐಸಿಸ್ ಸಂಪರ್ಕ ಹೊಂದಿರುವ ವೇದಿಕೆಯಲ್ಲಿರುವ ವ್ಯಕ್ತಿಯ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ಇಲ್ಲವೇ? ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ.

“ನಾನು ಈ ಹೇಳಿಕೆಯನ್ನು ನಾನು ಹಗುರವಾದ ಹೇಳಿಕೆ ನೀಡುತ್ತಿಲ್ಲ. ಸಂಪೂರ್ಣ ಗಂಭೀರವಾಗಿ ಹೇಳುತ್ತಿದ್ದೇನೆ. ನಾನು ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಪಡೆದುಕೊಂಡಿದ್ದೇನೆ. ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿ ಜತೆ ಸಿಎಂ ವೇದಿಕೆ ಹಂಚಿಕೊಂಡಿರುವುದು ಖಂಡನೀಯ’’ ಎಂದಿದ್ದಾರೆ.

”ಬೇಕಾದರೆ ಮಾಹಿತಿ ಪಡೆಯಲಿ. ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ, ವೇದಿಕೆಯಲ್ಲಿರುವ ಎಲ್ಲ ವ್ಯಕ್ತಿಗಳ ಬಗ್ಗೆ ಮಾಹಿತಿ ಲಭ್ಯವಿರುತ್ತದೆ. ಮುಸ್ಲಿಂ ಸಮಾವೇಶದಲ್ಲಿ ಯಾರು ವೇದಿಕೆಯಲ್ಲಿರುತ್ತಾರೆ ಎಂಬ ಬಗ್ಗೆ ಅವರಿಗೆ ಮಾಹಿತಿ ಇಲ್ಲವೇ? ಒಂದು ವಾರದಲ್ಲಿ ಎಲ್ಲಾ ವಿವರಗಳನ್ನು ಹಂಚಿಕೊಳ್ಳುತ್ತೇನೆ” ಎಂದು ಶಾಸಕ ಯತ್ನಾಳ್ ಹೇಳಿರುವುದು ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next