ಕೆ.ಪಾಟೀಲ್ ಅವರನ್ನು ಗುರುವಾರ ಭೇಟಿ ಮಾಡಿದ ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರು, ಪಕ್ಷದ ಈ ನಿರ್ಧಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆಂದು ತಿಳಿದು ಬಂದಿದೆ.
Advertisement
ದಕ್ಷಿಣ ಕರ್ನಾಟಕ ಭಾಗಕ್ಕಿಂತ ಉತ್ತರ ಕರ್ನಾಟಕ ಭಾಗದಲ್ಲಿಯೇ ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ. ಆದರೂ, ಎಲ್ಲಾ ಅಧಿಕಾರವೂ ದಕ್ಷಿಣ ಕರ್ನಾಟಕ ಭಾಗದವರ ಕೈಯಲ್ಲಿದೆ. ಪಕ್ಷ ಹಾಗೂ ಸರ್ಕಾರ ಎರಡೂ ಅಧಿಕಾರಗಳು ಒಂದೇ ಭಾಗದವರ ಕೈಯಲ್ಲಿರುವುದರಿಂದ ಆಡಳಿತ ಪಕ್ಷದಲ್ಲಿದ್ದರೂ ಯಾವುದೇ ಮರ್ಯಾದೆ ಇಲ್ಲದಂತಾಗಿದೆ. ಜೆಡಿಎಸ್ಗೆ ಉತ್ತರ ಕರ್ನಾಟಕ ಭಾಗದಲ್ಲಿ ಜನ ಬೆಂಬಲ ನೀಡಿಲ್ಲ ಎನ್ನುವ ಕಾರಣಕ್ಕೆ ಅವರು ಉತ್ತರ ಕರ್ನಾಟಕ ಭಾಗವನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ.
ಸೂಚನೆಯಂತೆ ಎಸ್.ಆರ್. ಪಾಟೀಲ್ ಅವರನ್ನು ಸಭಾಪತಿ ಮಾಡುವುದಾಗಿ ಭರವಸೆ ನೀಡಿ, ಕೊನೆ ಘಳಿಗೆಯಲ್ಲಿ ಅವರಿಗೆ ಅವಕಾಶ ತಪ್ಪಿಸಿರುವುದು ಉತ್ತರ ಕರ್ನಾಟಕ ಭಾಗದ ಬಗ್ಗೆ ಪಕ್ಷದ ನಾಯಕರಿಗೆ ಇರುವ ನಿರ್ಲಕ್ಷ್ಯ ಧೋರಣೆಯನ್ನು ಎತ್ತಿ ತೋರಿಸುತ್ತದೆ ಎಂದು
ಕಿಡಿ ಕಾರಿದ್ದಾರೆಂದು ತಿಳಿದು ಬಂದಿದೆ. ಈ ಕುರಿತು ಪಕ್ಷದ ರಾಜ್ಯ ನಾಯಕರು ಹಾಗೂ ಹೈಕಮಾಂಡ್ ಗಮನಕ್ಕೆ ತಂದು ಉತ್ತರ ಕರ್ನಾಟಕಕ್ಕೆ ಮೇಲಿಂದ ಮೇಲೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಡ ಹೇರಬೇಕೆಂದು ಎಚ್. ಕೆ.ಪಾಟೀಲರನ್ನು ಆಗ್ರಸಿದ್ದಾರೆ ಎಂದು ತಿಳಿದು ಬಂದಿದೆ.
Related Articles
ಮಾಜಿ ಸಚಿವ ಎಂ.ಬಿ.ಪಾಟೀಲ್, ಬಹಿರಂಗವಾಗಿಯೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಉತ್ತರ
ಕರ್ನಾಟಕ ಭಾಗಕ್ಕೆ ಅನ್ಯಾಯ ವಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿರುವ ಸಂದರ್ಭದಲ್ಲಿಯೇ ಎಸ್. ಆರ್.ಪಾಟೀಲರಿಗೆ ಭರವಸೆ ಮೂಡಿಸಿ, ಸಭಾಪತಿ ಸ್ಥಾನ ಕೈತಪ್ಪುವಂತೆ ಮಾಡಿರುವುದು ಉತ್ತರ ಕರ್ನಾಟಕ ಹಾಗೂ ಲಿಂಗಾಯತ ಸಮುದಾಯಕ್ಕೆ ಮಾಡಿರುವ ಅಪಮಾನ ಎಂದು ಆರೋಪಿಸಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ, ಶಾಸಕಾಂಗ ಪಕ್ಷದ ನಾಯಕ, ವಿಧಾನಸಭೆ ಸಭಾಧ್ಯಕ್ಷ, ಪರಿಷತ್ ಸಭಾಪತಿ ಸೇರಿ ಬಹುತೇಕ ಎಲ್ಲ ಸ್ಥಾನಗಳನ್ನೂ ದಕ್ಷಿಣ ಕರ್ನಾಟಕದವರಿಗೆ ನೀಡ ಲಾಗಿದೆ. ಉತ್ತರ ಕರ್ನಾಟಕ ಭಾಗ ದಿಂದ ಕಾಂಗ್ರೆಸ್ನಲ್ಲಿ 41 ಶಾಸಕರು ಆಯ್ಕೆಯಾಗಿದ್ದರೆ, ದಕ್ಷಿಣ ಕರ್ನಾ
ಟಕದಿಂದ 36 ಶಾಸಕರು ಮಾತ್ರ ಆಯ್ಕೆಯಾಗಿದ್ದಾರೆ. ಆದರೆ, ಉ.ಕ ಭಾಗಕ್ಕೆ 5 ಮಂತ್ರಿಸ್ಥಾನ ನೀಡಿದ್ದರೆ, ದಕ್ಷಿಣ ಕರ್ನಾಟಕದ 9 ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗಿದೆ. ಅಷ್ಟೇ ಅಲ್ಲದೆ, ಪ್ರಮುಖ ಇಲಾಖೆಗಳಾದ ಇಂಧನ, ಲೋಕೋಪಯೋಗಿ, ಜಲ ಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಇಲಾಖೆಗಳಿಗೆ ದಕ್ಷಿಣ ಕರ್ನಾಟಕದವರೇ ಸಚಿವರಾಗಿದ್ದಾರೆ. ಈ ಮೂಲಕ ಎಲ್ಲಾ
ವಿಭಾಗಗಳಲ್ಲಿಯೂ ಉತ್ತರ ಕರ್ನಾಟಕ ಭಾಗಕ್ಕೆ ಸಮ್ಮಿಶ್ರ ಸರ್ಕಾರದಲ್ಲಿ ಅನ್ಯಾಯ ಆಗುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
Advertisement
ಎಚ್ಕೆ ಭರವಸೆಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿರುವ ಎಚ್. ಕೆ. ಪಾಟೀಲ್, ಉತ್ತರ ಕರ್ನಾಟಕ ಭಾಗದ ಶಾಸಕರ ಭಾವನೆಗಳನ್ನು ರಾಜ್ಯ
ನಾಯಕರು ಹಾಗೂ ವಿಶೇಷವಾಗಿ ರಾಹುಲ್ ಗಾಂಧಿ ಅವರ ಗಮನಕ್ಕೆ ತಂದು ಅನ್ಯಾಯ ತಡೆ ಗಟ್ಟಲು ಮನವಿ ಮಾಡುತ್ತೇನೆ. ಶೀಘ್ರವೇ ಈ ಬಗ್ಗೆ ಹೈ ಕಮಾಂಡ್ಗೆ ಪತ್ರ ಬರೆಯುತ್ತೇನೆಂದು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.