Advertisement

ಶಾಸಕಿಗೆ ಬೆದರಿಕೆ: ಜೆಡಿಎಸ್‌ ಮುಖಂಡರ ವಿರುದ್ಧ ದೂರು

12:57 AM Apr 26, 2019 | Team Udayavani |

ಕಾರವಾರ: ಲೋಕಸಭಾ ಚುನಾವಣೆ ಮತದಾನದ ದಿನ ಶಾಸಕಿ ರೂಪಾಲಿ ನಾಯ್ಕಗೆ ಬೆದರಿಕೆಯೊಡ್ಡಿ ಹಲ್ಲೆಗೆ ಯತ್ನಿಸಿದ್ದರು ಎನ್ನಲಾದ ಇಬ್ಬರು ಜೆಡಿಎಸ್‌ ಕಾರ್ಯಕರ್ತರ ಮೇಲೆ ದೂರು ದಾಖಲಾಗಿದೆ.

Advertisement

ಈ ಬಗ್ಗೆ ಶಾಸಕಿ ರೂಪಾಲಿ ನಾಯ್ಕ ಪರ ಅವರ ಆಪ್ತ ಕಾರ್ಯದರ್ಶಿ ಗುರುಪ್ರಸಾದ ನಾಯ್ಕ ಕಾರವಾರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲೋಕಸಭಾ ಚುನಾವಣೆ ಮತದಾನದ ದಿನ ಏ.23ರಂದು ಮಧ್ಯಾಹ್ನ 3:30ಕ್ಕೆ ಶಾಸಕಿ ರೂಪಾಲಿ ನಾಯ್ಕ ತಮ್ಮ ವಾಹನದಲ್ಲಿ ಕಾರವಾರದಿಂದ ಅಂಕೋಲಾಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಬೈತಕೋಲ್ ಬಳಿ ಜೆಡಿಎಸ್‌ ಕಾರ್ಯಕರ್ತರೆಂದು ಹೇಳಿಕೊಂಡಿರುವ ಕಿಶನ್‌ ಕುವಾಳೇಕರ್‌ ಮತ್ತು ದರ್ಶನ ರಾಜೇಶ ಮಾಜಾಳಿಕರ್‌ ಎಂಬುವವರು ಶಾಸಕರ ಕಾರಿಗೆ ಅಡ್ಡ ನಿಂತು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿದ್ದರು ಎಂದು ಶಾಸಕರ ಆಪ್ತ ಕಾರ್ಯದರ್ಶಿ ದೂರಿನಲ್ಲಿ ವಿವರಿಸಿದ್ದಾರೆ. ಈ ಹಿಂದೆ ಕೂಡಾ ಶಾಸಕಿ ರೂಪಾಲಿ ನಾಯ್ಕ ಮೇಲೆ ಇದೇ ರೀತಿಯ ಘಟನೆಗಳು ನಡೆದಿದ್ದವು. ಆಗ ಈ ಬಗ್ಗೆ ಪೊಲೀಸರ ಗಮನಕ್ಕೆ ತರಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next