Advertisement

ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಸಭಾಪತಿ ಸ್ಥಾನ ಕೊಟ್ಟರೆ ನಿಭಾಯಿಸುವೆ: ಬಸವರಾಜ್ ಹೊರಟ್ಟಿ

12:10 PM Jul 06, 2022 | Team Udayavani |

ಬೆಂಗಳೂರು: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಸಭಾಪತಿ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

Advertisement

ಮಾಜಿ ಸಿಎಂ‌ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರ ಜತೆ ಮಾತಾನಾಡಿದ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಶಿಕ್ಷಣ ಮಂತ್ರಿ ಸ್ಥಾನ ಕೊಟ್ಟರೆ ನಿಭಾಯಿಸಬಹುದು. ಆದರೆ ಈಗ ಆ ಜವಾಬ್ದಾರಿ ಬೇಡ ಎಂದರು.

ನಾನು ಇಂದು ಪ್ರಮಾಣ ವಚನ ಸ್ವೀಕರಿಸುತ್ತೇನೆ. ಸಭಾಪತಿ ಸ್ಥಾನ ಕೊಟ್ಟರೆ‌ ನಿಭಾಯಿಸುತ್ತೇನೆ. ಆದರೆ ಯಾವುದೇ ಒತ್ತಡವಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next