Advertisement

ಬಿಜೆಪಿ ಅಭ್ಯರ್ಥಿ ಪರವಾಗಿ ವಿಎಸ್ಸೆಸ್ಸೆನ್ ಸೆಕ್ರೆಟರಿ ಪ್ರಚಾರಕ್ಕೆ ಕಾಂಗ್ರೆಸ್ ಆಕ್ಷೇಪ

02:22 PM Dec 08, 2021 | Team Udayavani |

ಗಂಗಾವತಿ: ರಾಯಚೂರು ಕೊಪ್ಪಳ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಚಿಕ್ಕಜಂತಕಲ್ ವಿಎಸ್ಸೆಸ್ಸೆನ್ ಸೊಸೈಟಿಯ ಸೆಕ್ರೆಟರಿ ಪ್ರಚಾರ ಮಾಡುತ್ತಿದ್ದು ಇದನ್ನು ಕೂಡಲೇ ತಡೆಯುವಂತೆ ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಸಚಿವ ಶಿವರಾಜ್ ತಂಗಡಗಿ ಒತ್ತಾಯಿಸಿದ್ದಾರೆ .

Advertisement

ಶೀಘ್ರವೇ ಬಿಜೆಪಿ ಪರ ಪ್ರಚಾರ ಮಾಡುತ್ತಿರುವ ವಿಎಸ್ಸೆಸ್ಸೆನ್ ಸೆಕ್ರೆಟರಿಯ ವಿರುದ್ಧ ಚುನಾವಣಾಧಿಕಾರಿಗಳಿಗೆ ದೂರು ನೀಡುವುದಾಗಿ ತಿಳಿಸಿದ್ದಾರೆ .

ಚಿಕ್ಕಜಂತಕಲ್ ಗ್ರಾ ಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಗ್ರಾಪಂ ಅಧ್ಯಕ್ಷರು ಮತ್ತು ಸದಸ್ಯರನ್ನು ಒಳಗೊಂಡು ವಿವಿಧ ಮುಖಂಡರು ಮತ್ತು ಮತದಾರರ ಬಳಿಗೆ ಸೆಕ್ರೆಟರಿ ಸತ್ಯನಾರಾಯಣ  ಭೇಟಿ ನೀಡಿ ಬಿಜೆಪಿ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ ಜೊತೆಗೆ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ ಆದ್ದರಿಂದ ಕೂಡಲೇ ಇವರನ್ನು ಬೇರೆ ಕಡೆ ವರ್ಗ ಮಾಡಬೇಕು ಅಥವಾ ಅಮಾನತು ನೆಡುವಂತೆ ಕಾಂಗ್ರೆಸ್ ಕಾರ್ಯಕರ್ತರು  ಒತ್ತಾಯಿಸಿದ್ದಾರೆ.

ವಿಪ ಚುನಾವಣೆಯ ಬಿಜೆಪಿ ಪ್ರಚಾರದ ಸಭೆಗಳಲ್ಲಿ ತಮ್ಮ ಪತ್ನಿಯ ಜತೆ ಸತ್ಯನಾರಾಯಣ ಪಾಲ್ಗೊಂಡು ಬಿಜೆಪಿ ಮುಖಂಡರೊಂದಿಗೆ ಚುನಾವಣೆ ಬಗ್ಗೆ ಮಾತನಾಡುತ್ತಿರುವ ವಿಡಿಯೊ ಮತ್ತು ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ವೈರಲ್ ಆಗಿದೆ.

ವಿಎಸ್ಸೆಸ್ಸೆನ್ ಕಾರ್ಯದರ್ಶಿ ಸರಕಾರಿ ನೌಕರರಾಗಿದ್ದು ಚುನಾವಣೆಗಳಲ್ಲಿ ಪ್ರಚಾರ ಮಾಡುತ್ತಿರುವ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಫೇಸ್ ಬುಕ್ ವಾಟ್ಸಾಪ್ ಇನ್ ಸ್ಟಾಗ್ರಾಂ ಖಾತೆಗಳಲ್ಲಿ ವ್ಯಾಪಕವಾಗಿ ಟೀಕಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next