Advertisement

MLC ಮೇಲ್ಮನೆಗೆ ಬಸವನಗೌಡ ಬಾದರ್ಲಿ ಏಕೈಕ ಸ್ಪರ್ಧಿ: ನಾಡಿದ್ದು ಅವಿರೋಧ ಆಯ್ಕೆ ಘೋಷಣೆ

10:22 PM Jul 02, 2024 | Team Udayavani |

ಬೆಂಗಳೂರು: ಸಂಸದ ಜಗದೀಶ್‌ ಶೆಟ್ಟರ್‌ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್‌ನ ಬಸವನಗೌಡ ಬಾದರ್ಲಿ ಹೊರತುಪಡಿಸಿ ಬೇರಾರೂ ನಾಮಪತ್ರ ಸಲ್ಲಿಸಿಲ್ಲ.

Advertisement

ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿತ್ತು. ಇದುವರೆಗೆ ಕಾಂಗ್ರೆಸ್‌ನ ಬಸವನಗೌಡ ಬಾದರ್ಲಿ ಬಿಟ್ಟು ಇನ್ಯಾರೂ ನಾಮಪತ್ರ ಸಲ್ಲಿಕೆ ಮಾಡಿಲ್ಲ. ಬುಧವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೂರು ಸೆಟ್‌ನಲ್ಲಿ ಉಮೇದುವಾರಿಕೆ ಸಲ್ಲಿಸಿರುವ ಬಾದರ್ಲಿ ಅವರ ನಾಮಪತ್ರ ಸಿಂಧುವಾದರೆ, ಅವಿರೋಧ ಆಯ್ಕೆಯನ್ನು ಶುಕ್ರವಾರ ಘೋಷಣೆ ಮಾಡಲಾಗುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next