Advertisement

ಮುದ್ದಹನುಮೇಗೌಡ, ರಾಜಣ್ಣಗೆ ಎಂಎಲ್ಸಿ ಗಿಫ್ಟ್?

12:33 AM Mar 30, 2019 | Vishnu Das |

ಬೆಂಗಳೂರು: ತುಮಕೂರಿನಲ್ಲಿ ಮೈತ್ರಿ ಪಕ್ಷಕ್ಕೆ ಕಂಟಕವಾಗಿದ್ದ ಹಾಲಿ ಸಂಸದ ಮುದ್ದಹನುಮೇಗೌಡ ಹಾಗೂ ಮಾಜಿ ಶಾಸಕ ಕೆ.ಎನ್‌. ರಾಜಣ್ಣ ಅವರು ಬಂಡಾಯ ಅಭ್ಯರ್ಥಿಗಳಾಗಿ ಸಲ್ಲಿಸಿರುವ ತಮ್ಮ ನಾಮಪತ್ರ ವಾಪಸ್‌ ಪಡೆದುಕೊಂಡಿದ್ದಾರೆ. ಇದರಿಂದ ತುಮಕೂರು ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮೈತ್ರಿ ಪಕ್ಷಗಳ ಬೆಂಬಲದ
ಜೆಡಿಎಸ್‌ ಅಭ್ಯರ್ಥಿ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ನಿಟ್ಟುಸಿರು ಬಿಡುವಂತಾಗಿದೆ.

Advertisement

ಹಾಲಿ ಸಂಸದರಾಗಿರುವ ಮುದ್ದಹನುಮೇಗೌಡರು ಪಕ್ಷದ ತೀರ್ಮಾನದಿಂದ ಬೇಸತ್ತು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಇದರಿಂದ ಸಂಕಷ್ಟಕ್ಕೆ ಸಿಲುಕಿದ್ದ
ರಾಜ್ಯ ಕಾಂಗ್ರೆಸ್‌ ನಾಯಕರು ಕಳೆದ ಐದು ದಿನಗಳಿಂದ ನಿರಂತರವಾಗಿ ಅವರ ಮನವೊಲಿಸುವ ಪ್ರಯತ್ನ ನಡೆಸಿದ್ದರು.

ಶುಕ್ರವಾರ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸೂಚನೆ ಮೇರೆಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಡಿಸಿಎಂ ಡಾ.ಜಿ.ಪರಮೇಶ್ವರ್‌ ಅವರು ಶುಕ್ರವಾರ
ಮುದ್ದಹನುಮೇಗೌಡರ ನಿವಾಸಕ್ಕೆ ತೆರಳಿ, ರಾಹುಲ್‌ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್‌ ಅವರ ಮೂಲಕ ಮನವೊಲಿಕೆ ಮಾಡಿದ ನಂತರ ನಾಮಪತ್ರ ವಾಪಸ್‌ ಪಡೆಯಲು ನಿರ್ಧರಿಸಿದರು ಎಂದು ತಿಳಿದು ಬಂದಿದೆ.

ಮಾಜಿ ಪ್ರಧಾನಿ ದೇವೇಗೌಡರೇ ಸ್ಪರ್ಧೆ ಮಾಡಿರುವುದರಿಂದ ಅವರ ವಿರುದಟಛಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದರೆ, ಮೈತ್ರಿ ಧರ್ಮ ಪಾಲನೆಗೆ ಧಕ್ಕೆಯಾಗುತ್ತದೆ. ಪಕ್ಷದಲ್ಲಿ ನಿಮಗೆ ಸೂಕ್ತ ಸ್ಥಾನ ನೀಡಿ, ನಿಮ್ಮ ಗೌರವ ಕಾಪಾಡುವ ಕೆಲಸ ಮಾಡುವ ಜವಾಬ್ದಾರಿ ನಮ್ಮದು ಎಂದು ಇಬ್ಬರೂ ನಾಯಕರು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಹೈಕಮಾಂಡ್‌ ನಾಯಕರ ಭರವಸೆಯ ಹಿನ್ನೆಲೆಯಲ್ಲಿ ನಾಮಪತ್ರ ವಾಪಸ್‌ ಪಡೆಯಲು ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ನಾಯಕರ ಮನವೊಲಿಕೆಯ ನಂತರ
ಮುದ್ದಹನುಮೇಗೌಡರು ತಮ್ಮ ಬೆಂಬಲಿಗರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕೆಲವು ಕಾರ್ಯಕರ್ತರು, ಪಕ್ಷದ ನಾಯಕರು ನಿಮಗೆ ಸೂಕ್ತ ಗೌರವ,
ಸ್ಥಾನಮಾನ ನೀಡುವ ಭರವಸೆ ನೀಡಿದ್ದರೆ, ನಾಮಪತ್ರ ವಾಪಸ್‌ ತೆಗೆದುಕೊಳ್ಳಿ, ಇಲ್ಲದಿದ್ದರೆ ಚುನಾವಣೆ ಎದುರಿಸಲು ನಾವು ಸಿದ್ದರಿದ್ದೇವೆ ಎಂದು ಹೇಳಿದ್ದಾರೆ.

Advertisement

ಆದರೆ, ಪಕ್ಷದ ನಾಯಕರ ಭರವಸೆಯ ಹಿನ್ನೆಲೆಯಲ್ಲಿ ನಾಮಪತ್ರ ವಾಪಸ್‌ ಪಡೆಯುವ ನಿರ್ಧಾರ ತೆಗೆದುಕೊಂಡು, ತಮಗೆ ಬೇಸರ ಆಗಿರುವುದರಿಂದ ತಮ್ಮ ಆಪ್ತ ರವಿಕುಮಾರ್‌ ಎನ್ನುವವರ ಮೂಲಕ ನಾಮಪತ್ರ ವಾಪಸ್‌ ಪಡೆದುಕೊಂಡಿದ್ದಾರೆ.
ಕಾಂಗ್ರೆಸ್‌ ಮೂಲಗಳ ಪ್ರಕಾರ ಅವರಿಗೆ ವಿಧಾನ ಪರಿಷತ್‌ ಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ತಮಗೆ ಆಗಿರುವ ನೋವಿನಿಂದಾಗಿ, ಸದ್ಯ ಚುನಾವಣೆ ಸಂದರ್ಭದಲ್ಲಿ ಅಂತರ ಕಾಯ್ದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮುದ್ದಹನುಮೇಗೌಡರು ನಾಮಪತ್ರ ವಾಪಸ್‌ ಪಡೆದರೆ ತಾವು ವಾಪಸ್‌ ಪಡೆಯುವುದಾಗಿ ಪಕ್ಷದ ನಾಯಕರಿಗೆ ಮಾತು ಕೊಟ್ಟಂತೆ ಮಾಜಿ ಶಾಸಕ ಕೆ.ಎನ್‌.ರಾಜಣ್ಣ ಕೂಡ ತಮ್ಮ ನಾಮಪತ್ರವನ್ನು ವಾಪಸ್‌ ಪಡೆದುಕೊಂಡ‌ರು.

Advertisement

Udayavani is now on Telegram. Click here to join our channel and stay updated with the latest news.

Next