Advertisement

ಶಿವಮೊಗ್ಗ: MLC ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್ ಹೃದಯಾಘಾತದಿಂದ ನಿಧನ

03:10 PM Oct 18, 2020 | Mithun PG |

ಶಿವಮೊಗ್ಗ: ಕಾಂಗ್ರೆಸ್‌ ಪಕ್ಷದ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್ (31) ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Advertisement

ಮುಂಜಾನೆ ಎದೆನೋವಿನಿಂದ ನಿತ್ರಾಣರಾಗಿ ಕುಸಿದು ಬಿದ್ದ ಸುಹಾಸ್ ನನ್ನು ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಎಂಎಲ್ ಸಿ ಪುತ್ರ ಸುಹಾಸ್ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ:  ಪತ್ನಿಯ ರುಂಡ ಕತ್ತರಿಸಿ ಆಕೆಯ ಪ್ರಿಯಕರನ ಮನೆಯ ಬಾಗಿಲಿನಲ್ಲಿಟ್ಟ ಪತಿ: ಬೆಚ್ಚಿಬೀಳುವ ಘಟನೆ !

ಪ್ರಸನ್ನ ಕುಮಾರ್ ಗೆ ಇಬ್ಬರು ಮಕ್ಕಳು ಸೂರಜ್ ಹಾಗೂ ಸುಹಾಸ್. ಮೂವತ್ತೊಂದು ವರ್ಷದ ಸುಹಾಸ್ ಒಂದು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದರು. ಕುಟುಂಬದ ವ್ಯವಹಾರ ನೋಡಿಕೊಳ್ಳುತ್ತಿದ್ದ ಸುಹಾಸ್ ಸರಳ ಸ್ನೇಹಜೀವಿಯಾಗಿದ್ದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಭಾರತಕ್ಕಿಂತ ಪಾಕಿಸ್ಥಾನವೇ ಉತ್ತಮವಾಗಿ ಕೋವಿಡ್ ನಿಯಂತ್ರಣ ಮಾಡಿದೆ: ಶಶಿ ತರೂರ್

Advertisement
Advertisement

Udayavani is now on Telegram. Click here to join our channel and stay updated with the latest news.

Next