Advertisement

ಸಾಹಿತಿ ಎಂ.ಎಂ.ಕಲಬುರ್ಗಿ ಹತ್ಯೆ ಕೇಸ್‌: ಸಾಕ್ಷಿಗಳ ಹೇಳಿಕೆ ದಾಖಲು

09:54 PM Oct 20, 2022 | Team Udayavani |

ಧಾರವಾಡ: ಸಾಹಿತಿ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ನಗರದ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎದುರು ಗುರುವಾರ ಹಾಜರುಪಡಿಸಲಾಗಿತ್ತು.

Advertisement

ಆರೋಪಿಗಳಾದ ಅಮೋಲ್‌ ಕಾಳೆ, ಗಣೇಶ ಮಿಸ್ಕಿನ್‌, ಪ್ರವೀಣ ಚತುರ್‌, ವಾಸುದೇವ ಸೂರ್ಯವಂಶಿ, ಶರದ್‌ ಕಳಾಸ್ಕರ್‌, ಅಮಿತ್‌ ಬದ್ದಿ ಅವರನ್ನು ನ್ಯಾಯಾಲಯದ ಎದುರು ವಿಚಾರಣೆಗೆ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ಹಾಜರಿದ್ದ ಇಬ್ಬರು ಸಾಕ್ಷಿಗಳ ಪೈಕಿ ಒಬ್ಬರಿಂದ ಆರೋಪಿಗಳನ್ನು ಗುರುತಿಸಿ ಸಾಕ್ಷಿ ಹೇಳಿಕೆ ಪಡೆಯಲಾಯಿತು.

4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶೋಭಾ ರಾಣಿ ಅವರು, ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿಗಳ ಹೇಳಿಕೆ ದಾಖಲಿಸಿಕೊಂಡರು. ಬಳಿಕ ಈ ಕುರಿತು ಹೆಚ್ಚಿನ ವಿಚಾರಣೆ ಇದೆ ಎಂದು ಅಭಿಪ್ರಾಯಪಟ್ಟು, ವಿಚಾರಣೆಯನ್ನು ನ.22ಕ್ಕೆ ಮುಂದೂಡಿದರು.

Advertisement

Udayavani is now on Telegram. Click here to join our channel and stay updated with the latest news.

Next