Advertisement

ಎಂಎಂಎನ್‌ಎಲ್‌: ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆ

10:04 AM Nov 04, 2019 | Team Udayavani |

ಉಡುಪಿ: ಮಣಿಪಾಲ ಮೀಡಿಯಾ ನೆಟ್‌ವರ್ಕ್‌ ಲಿ. ದೀಪಾವಳಿಯ ಅಂಗವಾಗಿ ಸಂಸ್ಥೆಯ ಸಿಬಂದಿಗೆ ನಡೆಸಿದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮ ಶನಿವಾರ ಮಣಿಪಾಲದ ಗೀತಾ ಮಂದಿರದಲ್ಲಿ ನಡೆಯಿತು. ಮಣಿಪಾಲ ಮೀಡಿಯಾ ನೆಟ್‌ವರ್ಕ್‌ ಲಿ.ನ ಆಡಳಿತ ನಿರ್ದೇಶಕ ಟಿ. ಸತೀಶ್‌ ಯು.ಪೈ ಅವರು ವಿಜೇತರಿಗೆ ಬಹುಮಾನ ವಿತರಿಸಿ, ಶುಭಹಾರೈಸಿದರು.

Advertisement

ಮಣಿಪಾಲ ಮೀಡಿಯಾ ನೆಟ್‌ವರ್ಕ್‌ ಲಿ.ನ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿನೋದ್‌ ಕುಮಾರ್‌ ಮಾತನಾಡಿ, ಸಂಸ್ಥೆಯ ವತಿಯಿಂದ ಆಯೋಜಿಸುವ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು. ಆ ಮೂಲಕ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಅವಕಾಶ ಸಿಗುತ್ತದೆ. ದೀಪಾವಳಿ ಅಂಗವಾಗಿ ನಡೆದ ಮಹಡಿ ಅಲಂಕರಣದಲ್ಲಿ ಎಂಎಂಎನ್‌ಎಲ್‌ ತಂಡದ ಪರಿಕಲ್ಪನೆಯಲ್ಲಿ ಮೂಡಿ ಬಂದ ಹಳ್ಳಿಮನೆ ತುಂಬ ಸುಂದರವಾಗಿತ್ತು.

ಇದೇ ಮೊದಲ ಬಾರಿ ಎಂಎಂಎನ್‌ಎಲ್‌ ತಂಡ ಒಂದಾಗಿ ಕೆಲಸ ಮಾಡಿರುವುದರಿಂದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದರು. ಎಂಎಂಎನ್‌ಎಲ್‌ ಗ್ರೂಪ್‌ ಸಂಸ್ಥೆಗಳ ಸಿಬಂದಿಗೆ ದೀಪಾವಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಎಂಎಂಎನ್‌ಎಲ್‌ ತಂಡ ಪ್ರಥಮ ಸ್ಥಾನ ಪಡೆದಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next