Advertisement

ಹಿಂದೂ ಯುವತಿ ಜತೆ ಬಸ್ಸಿನಲ್ಲಿ ಪ್ರಯಾಣ; ಯುವಕನ ಮೇಲೆ ತಂಡದಿಂದ ಹಲ್ಲೆ

10:30 AM Nov 26, 2022 | Team Udayavani |

ಮಂಗಳೂರು : ಹಿಂದೂ ಯುವತಿಯೊಂದಿಗೆ ಬಸ್‌ನಲ್ಲಿ ಒಂದೇ ಸೀಟಿನಲ್ಲಿ ಕುಳಿತು ಪ್ರಯಾಣಿಸಿದ್ದ ಎಂದು ಆರೋಪಿಸಿ ಯುವಕರ ತಂಡವೊಂದು ವಿದ್ಯಾರ್ಥಿ ಸೈಯದ್‌ ರಶೀಮ್‌ ಉಮರ್‌ (20) ಎಂಬಾತನಿಗೆ ಹಲ್ಲೆ ನಡೆಸಿರುವುದಾಗಿ ದೂರಲಾಗಿದೆ.

Advertisement

ಕಾರ್ಕಳದ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ರಶೀಮ್‌ಗೆ ತಂಡವೊಂದು ನ. 24ರ ಸಂಜೆ ನಂತೂರಿನಲ್ಲಿ ಬಸ್‌ ಒಳಗೆ ನುಗ್ಗಿ ಹಲ್ಲೆ ನಡೆಸಿದೆ. ಕಾರ್ಕಳ-ನಿಟ್ಟೆ ಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಒಂದೇ ಸೀಟ್‌ನಲ್ಲಿ ಸಹಪಾಠಿಯಾಗಿದ್ದ ಹಿಂದೂ ಯುವತಿ ಜತೆ ಸೈಯದ್‌ ರಶೀಮ್‌ ಉಮರ್‌ ಪ್ರತೀದಿನ ಪ್ರಯಾಣಿಸುತ್ತಿದ್ದ. ಈ ವಿಚಾರದಲ್ಲಿ 3-4 ಮಂದಿ ಅಪರಿಚಿತರು ಬಸ್ಸಿನೊಳಗೆ ನುಗ್ಗಿ ಏಕಾಏಕಿಯಾಗಿ ಆತನನ್ನು ಎಳೆದು ಹಾಕಿ ಹಲ್ಲೆ ನಡೆಸಿದ್ದಾರೆ. ಅಷ್ಟರಲ್ಲಿ ಅಲ್ಲಿ ಕರ್ತವ್ಯದಲ್ಲಿದ್ದ ಟ್ರಾಫಿಕ್‌ ಪೊಲೀಸರು ಬಂದು ಹೆಚ್ಚಿನ ಹಲ್ಲೆಯಾಗುವುದನ್ನು ತಪ್ಪಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ತಂಡ ಹಲ್ಲೆ ನಡೆಸಿದ್ದಲ್ಲದೆ ಬಸ್ಸಿನಿಂದ ಕೆಳಗೆ ಇಳಿಸಿ ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂಬುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸೈಯದ್‌ ರಶೀಮ್‌ ಉಮರ್‌ ದೂರಿನಲ್ಲಿ ತಿಳಿಸಿದ್ದಾರೆ. ಕದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next