Advertisement

ಸೂರ್ಯಂಗೂ ಚಂದ್ರಂಗೂ…ಖ್ಯಾತಿಯ ಸಾಹಿತಿ ಎಂ.ಎನ್.ವ್ಯಾಸರಾವ್ ನಿಧನ 

01:32 PM Jul 15, 2018 | |

ಬೆಂಗಳೂರು: ಗೀತರಚನಕಾರ, ಕವಿ, ಕಥೆಗಾರ, ಕಾದಂಬರಿಕಾರರಾದ ಎಂ.ಎನ್. ವ್ಯಾಸರಾವ್ ಅವರು ಬೆಂಗಳೂರಿನ ನಿವಾಸದಲ್ಲಿ  ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. 

Advertisement

ಜನವರಿ 27, 1945ರಂದು ಮೈಸೂರಿನಲ್ಲಿ ಜನಿಸಿದ್ದ ಅವರು 15 ಕ್ಕೂ ಹೆಚ್ಚು ಕ್ಯಾಸೆಟ್‌ಗಳಿಗೆ ಗೀತೆಗಳು, 35 ಕ್ಕೂ ಹೆಚ್ಚು  ಜನಪ್ರಿಯ ಧಾರಾವಾಹಿಗಳಿಗೆ ಸಾಹಿತ್ಯ ಒದಗಿಸಿದ್ದರು. 

ವ್ಯಾಸರಾವ್‌ ನಿಧನಕ್ಕೆ ಚಿತ್ರರಂಗದ ಗಣ್ಯರು, ಸಾಹಿತಿಗಳು ತೀವ್ರ ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ. 

ಶುಭಮಂಗಳ ಚಿತ್ರದ ಸೂರ್ಯಂಗೂ ಚಂದ್ರಂಗೂ ಬಂದಾರೆ ಮುನಿಸು.. , ನೀನಿಲ್ಲದೇ ನನಗೇನಿದೆ.., ಚಂದ ಚಂದ ಸಂಗಾತಿ ನೋಟವೇ ಚಂದ ಮುಂತಾದವರು ಅವರು ಬರೆದ ಜನಪ್ರಿಯ ಗೀತ ಸಾಹಿತ್ಯಗಳು. 

ಯುನೈಟೆಡ್‌ ಬ್ಯಾಂಕ್‌ನಲ್ಲಿ ಅಧಿಕಾರಿಯಾಗಿ 34 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next