Advertisement

ಸಿಎಂ ಭೇಟಿ ವೇಳೆ ಮೊಬೈಲ್‌ ನಿಷಿದ್ಧ

01:56 AM Nov 08, 2019 | mahesh |

ಬೆಂಗಳೂರು: ಸಿಎಂ ಗೃಹಕಚೇರಿ ಕೃಷ್ಣಾ, ಖಾಸಗಿ ನಿವಾಸ ಧವಳಗಿರಿ ಮತ್ತು ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿರುವ ಕೊಠಡಿಯಲ್ಲಿ ಸಾರ್ವಜನಿಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡುವ ಸಂದರ್ಭದಲ್ಲಿ ಮೊಬೈಲ್‌ ತರುವುದನ್ನು ನಿಷೇಧಿಸಲಾಗಿದೆ.

Advertisement

ಹುಬ್ಬಳ್ಳಿ ವೀಡಿಯೋ ಪ್ರಕರಣದ ಅನಂತರ ಎಚ್ಚೆತ್ತುಕೊಂಡಿರುವ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರು, ತಮ್ಮ ನಿವಾಸದಲ್ಲಿ ಸಾರ್ವಜನಿಕರು ಮತ್ತು ಬಿಜೆಪಿ ಕಾರ್ಯಕರ್ತರು, ಮುಖಂಡರು ಭೇಟಿಗೆ ಬರುವ ಸಂದರ್ಭದಲ್ಲಿ ಮೊಬೈಲ್‌ ಫೋನ್‌ ಒಳಗಡೆ ತರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಮತ್ತು ಸಿಬಂದಿ ವರ್ಗಕ್ಕೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಆದರೆ ಅತಿ ಪ್ರಮುಖರು ಮತ್ತು ಅತಿಗಣ್ಯರಿಗೆ ಮಾತ್ರ ಮೊಬೈಲ್‌ ಕೊಂಡೊಯ್ಯಲು ಅವಕಾಶ ಇದೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next