Advertisement

ಬೈಕಿನಲ್ಲಿ ತೆರಳುತ್ತಿದ್ದಾಗ ಪ್ಯಾಂಟ್ ಕಿಸೆಯಲ್ಲಿದ್ದ ಮೊಬೈಲ್ ಸ್ಪೋಟ: ಯುವಕನಿಗೆ ಗಾಯ

08:32 PM Sep 16, 2020 | sudhir |

ಸೊರಬ: ಬೈಕ್‍ನಲ್ಲಿ ತೆರಳುತ್ತಿದ್ದಾಗ ಪ್ಯಾಂಟ್ ಕಿಸೆಯಲ್ಲಿದ್ದ ಮೊಬೈಲ್ ಸ್ಪೋಟಗೊಂಡು ಬೈಕ್ ಸವಾರ ಗಾಯಗೊಂಡಿರುವ ಘಟನೆ ತಾಲೂಕಿನ ಕುಪ್ಪಗಡ್ಡೆ ಗ್ರಾಮದ ಕೆರೆ ಸಮೀಪ ಬುಧವಾರ ನಡೆದಿದೆ.

Advertisement

ತವನಂದಿ ಗ್ರಾಮದ ಬಿ. ಶರತ್ (22) ಗಾಯಗೊಂಡ ಯುವಕನಾಗಿದ್ದು ಈತ ತವನಂದಿ ಗ್ರಾಮದಿಂದ ಕುಪ್ಪಗಡ್ಡೆಗೆ ತೆರಳುವ ಸಂದರ್ಭದಲ್ಲಿ ಮೊಬೈಲ್ ಸ್ಪೋಟಗೊಂಡಿದೆ. ನಿಯಂತ್ರಣ ಕಳೆದುಕೊಂಡ ಯುವಕ ಬೈಕ್‍ನೊಂದಿಗೆ ಕೆರೆಗೆ ಬಿದ್ದಿದ್ದಾನೆ. ಅದೃಷ್ಟವಶಾತ್ ಯಾವುದೇ ಜೀವಹಾನಿಯಾಗಿಲ್ಲ.

ಯುವಕನ ಬಲ ತೊಡೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನೂ ಶರತ್ ಬಳಸುತ್ತಿದ್ದ ಮೊಬೈಲ್ ಚೈನದಲ್ಲಿ ತಯಾರಿಸಿದ್ದು ಹಾಗೂ ಬೆಂಗಳೂರಿನ ಶೋರೂಂವೊಂದರಲ್ಲಿ ಖರೀಸಿದ್ದನು ಎನ್ನಲಾಗುತ್ತಿದೆ. ಆನವಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next