Advertisement

ಮೊಬೈಲ್‌ ಆರೋಗ್ಯ ತಪಾಸಣಾ ವಾಹನ ಕೊಡುಗೆ

05:15 PM Jan 27, 2020 | Team Udayavani |

ಹೊಸಕೋಟೆ: ತಾಲೂಕಿನ ದೇವನಗೊಂದಿಯಲ್ಲಿರುವ ಭಾರತ್‌ ಪೆಟ್ರೋಲಿಯಂ ಸಂಸ್ಥೆಯ ವತಿಯಿಂದ ಮೊಬೈಲ್‌ ಆರೋಗ್ಯ ತಪಾಸಣಾ ವಾಹನವನ್ನು ಕೊಡುಗೆಯಾಗಿ ನೀಡಲಾಗಿದೆ ಎಂದು ಸಂಸ್ಥೆಯ ಮಾರುಕಟ್ಟೆ ಮುಖ್ಯಸ್ಥ ಸಂಜೀವ್‌ಕುಮಾರ್‌ ಹೇಳಿದರು. ಅವರು ಸಂಸ್ಥೆಯ ಆವರಣದಲ್ಲಿ ಮೊಬೈಲ್‌ ಆರೋಗ್ಯ ತಪಾಸಣಾ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

Advertisement

ಆರೋಗ್ಯವಂತ ಸಮಾಜ ನಿರ್ಮಿಸಲು ವಾಹನವನ್ನು ನೀಡಲಾಗಿದ್ದು ವಾರದಲ್ಲಿ 6 ದಿನಗಳ ಕಾಲ ಸೇವೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪ್ರಾಯೋಗಿಕವಾಗಿ ತಾಲೂಕಿನ ಅನುಗೊಂಡನಹಳ್ಳಿ ಮತ್ತು ಜಡಿಗೇನಹಳ್ಳಿ ಹೋಬಳಿಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲಿದ್ದು ಪ್ರಾಥಮಿಕ ತಪಾಸಣಾ ಯಂತ್ರಗಳನ್ನು ಒಳಗೊಂಡು ತುರ್ತು ಚಿಕಿತ್ಸೆ ಪಡೆಯಲು ಸಹಕಾರಿಯಾಗಲಿದೆ.

ಇದರಿಂದ ಗಡಿಪ್ರದೇಶದ ನಿವಾಸಿಗಳಿಗೆ ಉಪಯೋಗವಾಗಲಿದ್ದು ಈ ಸೇವೆಯನ್ನು ಹಂತ ಹಂತವಾಗಿ ತಾಲೂಕಿನಾದ್ಯಂತ ವಿಸ್ತರಿಸಲು ಯೋಜಿಸಲಾಗಿದೆ. ವಾರ್ಷಿಕ 25 ಸಾವಿರ ರೋಗಿಗಳು ಈ ವ್ಯವಸ್ಥೆಯ ಪ್ರಯೋಜನ ಪಡೆದುಕೊಳ್ಳಬಹುದಾಗಿದ್ದು ಸಂಸ್ಥೆಯ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ ಸೌಲಭ್ಯ ಒದಗಿಸಲಾಗಿದೆ ಎಂದರು. ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ರಿತೀಶ್‌ ಎಂ. ಲೊನಾರಿ, ಅಧಿಕಾರಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next