Advertisement

Bangalore: ನಮಾಜ್‌ ವೇಳೆ ಹನುಮಾನ್‌ ಚಾಲೀಸ ಹಾಕಿದ ಮೊಬೈಲ್‌ ಅಂಗಡಿ ಮಾಲೀಕನಿಗೆ ಥಳಿತ?

10:15 AM Mar 18, 2024 | Team Udayavani |

ಬೆಂಗಳೂರು:  ನಮಾಜ್‌ ಮಾಡುವ ಸಮಯದಲ್ಲಿ ಹನುಮಾನ್‌ ಚಾಲೀಸ್‌ ಹಾಕಿದಕ್ಕೆ ಮೊಬೈಲ್‌ ಶಾಪ್‌ ಮಾಲೀಕನ ಮೇಲೆ ಐವರು ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆ ಹಲಸೂರು ಗೇಟ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಮುಖೇಶ್‌ ಹಲ್ಲೆಗೊಳಗಾದ ಯುವಕ. ಘಟನೆ ಸಂಬಂಧ ಐವರು ಅನ್ಯ ಕೋಮಿನ ಯುವಕ ರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ನಗರತ್‌ಪೇಟೆಯಲ್ಲಿ ಮುಖೇಶ್‌ ಮೊಬೈಲ್‌ ಸರ್ವೀಸ್‌ ಅಂಗಡಿ ಹೊಂದಿದ್ದಾನೆ. ಭಾನುವಾರ ಸಂಜೆ ಅಂಗಡಿಯಲ್ಲಿ ಹನುಮಾನ್‌ ಚಾಲೀಸ್‌ ಹಾಕಿದ್ದು, ಜೋರು ಶಬ್ಧ ಕೊಟ್ಟಿದ್ದ ಎಂದು ಹೇಳಲಾಗಿದೆ. ಅದೇ ವೇಳೆ ಅನ್ಯಕೋವಿನ ಯುವಕರು ನಮಾಜ್‌ ಮಾಡುತ್ತಿದ್ದರು ಎನ್ನಲಾಗಿದೆ. ನಮಾಜ್‌ ಮಾಡುವಾಗ ಜೋರು ಶಬ್ಧ ಕೇಳಿದ್ದರಿಂದ ಆಕ್ರೋಶಗೊಂಡ ಐವರು ಯುವಕರು, ಮುಖೇಶ್‌ ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.

ಬಳಿಕ ಆತನನ್ನು ಅಂಗಡಿಯಿಂದ ಹೊರ ಎಳೆದು ಮನಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ. ಅದರಿಂದ ಮುಖೇಶ್‌ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಸಂಬಂಧ 5 ಯುವಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು. ಹಲಸೂರುಗೇಟ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next