Advertisement
ಬುಧವಾರ ಜಿಲ್ಲಾಧಿಕಾರಿ ಆವರಣದಲ್ಲಿ ಹಳ್ಳಿ ಸಂಚರಿಸಿ ಜನರಿಗೆ ಕೊವಿಡ್- 19 ಲಸಿಕೆ ಹಾಕುವ ವೈದ್ಯಕೀಯ ಮಾದರಿಯಲ್ಲಿ ಸಿದ್ದಗೊಂಡ ಸಂಚಾರಿ ಲಸಿಕಾ ಬಸ್ ಗಳೆರಡಕ್ಕೆ ಹಸಿರು ನಿಶಾನೆ ತೋರಿಸಿ ಕೊವಿಡ್ 19 ಲಸಿಕಾ ಬಸ್ ವಾಹನಗಳ ಅಭಿಯಾನಕ್ಕೆ ಚಾಲನೆ ನೀಡಿದರು.
Related Articles
Advertisement
ಕೋವಿಡ್ ಸಂಚಾರಿ ಲಸಿಕಾ ವಾಹನವು ಒಟ್ಟು ಮೂರು ವಿಭಾಗಗಳನ್ನು ಹೊಂದಿದ್ದು, ಮೊದಲನೇ ವಿಭಾಗದಲ್ಲಿ ನೋಂದಣಿ ಪ್ರಕ್ರಿಯೆ ನಡೆಯಲ್ಲಿದೆ. ಎರಡನೇ ವಿಭಾಗದಲ್ಲಿ ಲಸಿಕಾಕರಣ ನೀಡಲಾಗುವುದು ಹಾಗೂ ಕೊನೆಯ ವಿಭಾಗದಲ್ಲಿ ಲಸಿಕೆ ಪಡೆದ ನಂತರ ವಿಶ್ರಾಂತಿಗೆ ವ್ಯವಸ್ಥೆ ಮಾಡಿದೆ. ಕುಡಿಯುವ ನೀರು ಸೇರಿದಂತೆ ಇತರ ವ್ಯವಸ್ಥೆ ಬಸ್ ನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ರಾಜಕುನಾರ ಪಾಟೀಲ ತೆಲ್ಕೂರ ಬಸ್ ವಿನ್ಯಾಸದ ಕುರಿತು ವಿವರಿಸಿದರು.
ಲಸಿಕೆ ಭಯ ಹಾಗೂ ಲಸಿಕೆ ಹಾಕುವ ಕೇಂದ್ರ ದೂರ ಇರುವ ಕಾರಣದಿಂದ ಹೆಚ್ಚಿನ ಜನರು ಲಸಿಕೆ ಹಾಕಿಕೊಳ್ಳಲು ಹೆಚ್ಚಿನ ಆಸಕ್ತಿ ತೋರಿರಲಿಲ್ಲ. ಆದರೆ ಈಗ ಜಾಗೃತಿ ಯಾಗಿದ್ದರಿಂದ ಜನರು ನಿರೀಕ್ಷೆ ಮೀರಿ ಲಸಿಕೆ ಆಗಮಿಸುತ್ತಿದ್ದು, ಗ್ರಾಮೀಣ ಭಾಗದ ಜನರಿಗೆ ಇದು ಹೆಚ್ಚಿನ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಈ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಎಂ.ವೈ ಪಾಟೀಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಕೂರ್ಮಾರಾವ್, ಮುಖ್ಯ ಸಂಚಾರ ವ್ಯವಸ್ಥಾಪಕ ಡಿ. ಕೊಟ್ರಪ್ಪ, ಮುಖ್ಯ ತಾಂತ್ರಿಕ ಶಿಲ್ಪಿ ಗಜೇಂದ್ರಕುಮಾರ, ವಿಭಾಗೀಯ ನಿಯಂತ್ರಣಾಧಿಕಾರಿ ಸಂತೋಷ ಕುಮಾರ್, ವಿಭಾಗೀಯ ತಾಂತ್ರಿಕ ಶಿಲ್ಪಿ ನಾಗರಾಜ ಹಾಗೂ ಈರಣ್ಣ ದುಧನಿ ಮತ್ತಿತರ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.