Advertisement
ಮತದಾನ ದಿನದ ಆಸುಪಾಸು ಸಾಲು ರಜೆಗಳು ಬಂದಿವೆ. ಈ ವೇಳೆ ನಗರದಲ್ಲಿ ನೆಲೆಸಿರುವ ಅನೇಕರು ಬೇರೆ ಬೇರೆ ಊರುಗಳಿಗೆ ಹೋಗುತ್ತಾರೆ. ಇದರ ಲಾಭ ಪಡೆಯಲು ಖಾಸಗಿ ಬಸ್ ಮಾಲಿಕರು ಬೇಕಾಬಿಟ್ಟಿ ಪ್ರಯಾಣ ದರ ಹೆಚ್ಚಳ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ.
Related Articles
Advertisement
ದರ ಏರಿಕೆ ಪ್ರಸ್ತಾವನೆ: ಕೆಎಸ್ಆರ್ಟಿಸಿ ಶೇ.18ರಿಂದ 20ರಷ್ಟು ಬಸ್ ಪ್ರಯಾಣ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ ಬೆನ್ನಲ್ಲೇ ಖಾಸಗಿ ಬಸ್ ಪ್ರಯಾಣ ದರವನ್ನೂ ಶೇ.18ರಷ್ಟು ಏರಿಕೆ ಮಾಡುವಂತೆ ಮಾಲಿಕರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಅದನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ.
ಚುನಾವಣೆ ನಂತರ ಈ ಬಗ್ಗೆ ಸ್ಪಷ್ಟ ನಿರ್ಧಾರ ಹೊರಬೀಳಲಿದೆ ಎಂದು ವಿ.ಪಿ. ಇಕ್ಕೇರಿ ತಿಳಿಸಿದರು. 2014ರಿಂದ ಬಸ್ಗಳ ದರ ಪರಿಷ್ಕರಣೆ ಆಗಿಲ್ಲ. ಈ ಮಧ್ಯೆ ಡೀಸೆಲ್ ದರ ಸಾಕಷ್ಟು ಏರಿಕೆ ಆಗಿದೆ. ವಾರದಲ್ಲಿ ಎರಡು-ಮೂರು ದಿನ ಬಸ್ಗಳು ಕಾರ್ಯಾಚರಣೆ ಮಾಡುವುದೇ ಇಲ್ಲ.
ಹೀಗಾಗಿ ನಿರ್ವಹಣಾ ವೆಚ್ಚವೂ ಸಂಗ್ರಹವಾಗುತ್ತಿಲ್ಲ. ದರ ಪರಿಷ್ಕರಣೆ ಮಾಡಬೇಕು ಎಂದು ಖಾಸಗಿ ಬಸ್ಗಳ ಮಾಲಿಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುವುದು. ಇದೆಲ್ಲವೂ ಮಜಲು ವಾಹನಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಹೇಳಿದರು.
ಖಾಸಗಿ ಬಸ್ಗಳಿಗೆ ಯಾವುದೇ ಪ್ರಯಾಣ ದರವೇ ನಿಗದಿ ಆಗಿಲ್ಲ. ಹೀಗಿರುವಾಗ, ಯಾವ ಆಧಾರದಲ್ಲಿ ದಂಡ ಅಥವಾ ಶಿಸ್ತು ಕ್ರಮ ಕೈಗೊಳ್ಳುತ್ತೀರಿ ಎಂದು ಕೇಳಿದಾಗ, “ದರ ನಿಗದಿ ಆಗಿಲ್ಲ ಎನ್ನುವುದು ನಿಜ.
ಆದರೆ, ಸಾಮಾನ್ಯ ದಿನಗಳಲ್ಲಿ ಅವರು ವಿಧಿಸುವ ಪ್ರಯಾಣ ದರ ಹಾಗೂ ವಿಶೇಷ ಸಂದರ್ಭಗಳಲ್ಲಿ ವಿಧಿಸುವ ದರ ಮತ್ತು ಸರ್ಕಾರಿ ಬಸ್ಗಳ ದರಗಳಿಗೆ ತಾಳೆ ಹಾಕಲಾಗುವುದು. ತುಂಬಾ ವ್ಯತ್ಯಾಸ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಸ್ಪಷ್ಟಪಡಿಸಿದರು.
1.35 ಕೋಟಿ ರೂ. ದಂಡ ವಸೂಲಿ: ಬೇಕಾಬಿಟ್ಟಿ ಪ್ರಯಾಣದರ ಹೆಚ್ಚಳ ಮಾಡಿದವರ ವಿರುದ್ಧ 2018ರ ನವೆಂಬರ್ನಿಂದ 2019ರ ಫೆಬ್ರವರಿ ನಡುವಿನ ಅವಧಿಯಲ್ಲಿ ರಾಜ್ಯ ಸಾರಿಗೆ ಪ್ರಾಧಿಕಾರದಿಂದ ಕಾರ್ಯಾಚರಣೆ ನಡೆಸಿ, 1.35 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ. ಒಟ್ಟಾರೆ 842 ಪ್ರಕರಣಗಳ ತನಿಖೆ ನಡೆಸಿದ್ದು, 584 ರಹದಾರಿ ಅಮಾನತು ಮಾಡಲಾಗಿದೆ. 59 ರಹದಾರಿಗಳನ್ನು ರದ್ದು ಮಾಡಲಾಗಿದೆ ಎಂದು ವಿ.ಪಿ.ಇಕ್ಕೇರಿ ತಿಳಿಸಿದರು.