Advertisement

ಮೈಸೂರು ದೇಶಕ್ಕೇ ಮಾದರಿ: ಸುಧಾಕರ್‌

08:15 AM May 16, 2020 | Lakshmi GovindaRaj |

ಬೆಂಗಳೂರು: ಕೆಂಪು ವಲಯದಲ್ಲಿದ್ದ ಮೈಸೂರು ಕೋವಿಡ್‌ 19 ಸೋಂಕು ಮುಕ್ತವಾಗಿದ್ದು ದೇಶಕ್ಕೆ ಮಾದರಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹರ್ಷ ವ್ಯಕ್ತಪಡಿಸಿದ್ದಾರೆ. ಯಾವುದೇ ಪ್ರಾಣಹಾನಿ ಇಲ್ಲದೇ  ಎಲ್ಲಾ 90 ಮಂದಿ ಸೋಂಕಿತರು ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ. ಇದರೊಂದಿಗೆ ಕೆಂಪು ವಲಯವಾಗಿದ್ದ ಮೈಸೂರು ಜಿಲ್ಲೆ ಹಸಿರು ವಲಯದತ್ತ ಹೆಜ್ಜೆ ಹಾಕಿರುವುದು ಆಶಾದಾಯಕ ಬೆಳವಣಿಗೆ.

Advertisement

ಸರ್ಕಾರ ಕೈಗೊಂಡ  ಪರಿಣಾಮಕಾರಿ ಕ್ರಮ, ಜಿಲ್ಲಾಡಳಿತದ ಪರಿಶ್ರಮ ಹಾಗೂ ಜಿಲ್ಲೆಯ ಜನತೆಯ ಸಹಕಾರದಿಂದ ಇದನ್ನು ಸಾಧಿಸಲು ಸಾಧ್ಯವಾಗಿದೆ. ಇದಕ್ಕೆ ಕಾರಣರಾದ ಎಲ್ಲರನ್ನೂ ಅಭಿನಂದಿಸುತ್ತೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆರಂಭದಲ್ಲಿ  ಸೋಂಕಿತರ ಸಂಖ್ಯೆ ಆತಂಕ ಮೂಡಿಸಿತ್ತು. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಸರ್ಕಾರದ ಸೂಚನೆಗಳನ್ನು ಚಾಚೂ ತಪ್ಪದೆ ಪಾಲಿಸಿದ ಜಿಲ್ಲಾಡಳಿತದ ಪರಿಶ್ರಮ ಇದಕ್ಕೆ ಕಾರಣ ಎಂದು ಮೆಚ್ಚುಗೆ  ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next