Advertisement

‘ರುಡ್‌ಸೆಟ್‌ ದೇಶಕ್ಕೆ  ಮಾದರಿ’

04:32 PM Jun 17, 2018 | Team Udayavani |

ಬೆಳ್ತಂಗಡಿ: ರುಡ್‌ಸೆಟ್‌ ಸಂಸ್ಥೆ ಉದ್ಯೋಗ ಬಯಸುವವರಿಗೆ ಪ್ರೇರಣೆಯಾಗಿದ್ದು, ದೇಶಕ್ಕೆ ಮಾದರಿ ಸಂಸ್ಥೆಯಾಗಿದೆ. ರುಡ್‌ಸೆಟ್‌ ಸಂಸ್ಥೆಯಲ್ಲಿ ತರಬೇತಿ ಪಡೆಯಲು ದೊರೆತ ಅವಕಾಶ ಸದುಪಯೋಗಪಡಿಸಿ ಕೊಂಡು ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಿ ಉತ್ತಮ ಪ್ರಜೆಗಳಾಗಿ ಬದುಕಬೇಕು. ಇಚ್ಛಾಶಕ್ತಿ ಮತ್ತು ಮುನ್ನುಗ್ಗುವ ಛಲ ಅಗತ್ಯ ಎಂದು ಶಾಸಕ ಹರೀಶ್‌ ಪೂಂಜ ಹೇಳಿದರು.

Advertisement

ಅವರು ಉಜಿರೆಯ ರುಡ್‌ಸೆಟ್‌ ಸಂಸ್ಥೆಯಲ್ಲಿ ಸೆಲ್‌ ಫೋನ್‌ ರಿಪೇರಿ, ಸರ್ವಿಸ್‌ ತರಬೇತಿ ಮತ್ತು ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ರುಡ್‌ಸೆಟ್‌ ಸಂಸ್ಥೆ ಕೇಂದ್ರ ಕಚೇರಿ ಕಾರ್ಯ ನಿರ್ವಾಹಕ ನಿರ್ದೇಶಕ ಎಂ. ಜನಾರ್ದನ್‌ ಅಧ್ಯಕ್ಷತೆ ವಹಿಸಿದ್ದರು. ಕಂಪ್ಯೂಟರೈಸ್ಡ್ ಅಕೌಂಟಿಂಗ್‌ ಮತ್ತು ಮೋಟಾರ್‌ ರಿವೈಂಡಿಂಗ್‌ ತರಬೇತಿ ಶಿಬಿರಾರ್ಥಿಗಳು ಉಪಸ್ಥಿತರಿದ್ದರು. ಸಂಸ್ಥೆಯ ನಿರ್ದೇಶಕ ವಿನಯ್‌ ಕುಮಾರ್‌ ಸ್ವಾಗತಿಸಿ, ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್‌ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಉಪನ್ಯಾಸಕಿ ಅನಸೂಯಾ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next