Advertisement

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

01:41 AM Sep 27, 2024 | Team Udayavani |

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಗುರುವಾರ ಸಾಧಾರಣ ಮಳೆಯಾಗಿದೆ.

Advertisement

ಹಗಲಿನ ಹೆಚ್ಚಿನ ಅವಧಿಯಲ್ಲಿ ಎರಡೂ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು.

ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂದಿನ ಮೂರು ದಿನ ಯಾವುದೇ ಮುನ್ಸೂಚನೆ ಇಲ್ಲ.ಸೆ.30ರಂದು ಕರಾವಳಿಯಲ್ಲಿ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದ್ದು, ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಮಂಗಳೂರಿನಲ್ಲಿ 29.8 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.8 ಡಿ.ಸೆ. ಕಡಿಮೆ ಮತ್ತು 24 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.8 ಡಿ.ಸೆ. ಏರಿಕೆ ಕಂಡಿತ್ತು.

ಸುಳ್ಯ: ಉತ್ತಮ ಮಳೆ
ಸುಳ್ಯ: ಸುಳ್ಯ ತಾಲೂಕಿನ ವಿವಿಧೆಡೆ ಗುರು ವಾರವೂ ಉತ್ತಮ ಮಳೆ ಮುಂದುವರಿದಿದೆ.ಬುಧವಾರ ರಾತ್ರಿ ಸಹಿತ ಇಡೀ ದಿನ ಉತ್ತಮ ಮಳೆಯಾಗಿತ್ತು. ಗುರುವಾರ ಮಧ್ಯಾಹ್ನ ವೇಳೆಗೆ ಧಾರಾಕಾರ ಮಳೆಯಾಗಿದೆ. ಸುಳ್ಯ ನಗರ, ಜಾಲ್ಸೂರು, ಮಂಡೆಕೋಲು, ಬೆಳ್ಳಾರೆ, ಪಂಜ, ಅರಂತೋಡು, ಸಂಪಾಜೆ, ಗುತ್ತಿಗಾರು, ಕೊಲ್ಲಮೊಗ್ರು, ಸುಬ್ರಹ್ಮಣ್ಯ, ಬಳ್ಪ, ಎಡಮಂಗಲ ಭಾಗದ ವಿವಿಧೆಡೆಯೂ ಮಳೆಯಾಗಿದೆ.

Advertisement

ಬೆಳ್ತಂಗಡಿ ಮತ್ತು ಪುತ್ತೂರು ತಾಲೂಕಿನ ಕೆಲವೆಡೆ ಸಾಧಾರಣ ಮಳೆ ಸುರಿದಿದೆ. ಬಂಟ್ವಾಳ, ಉಡುಪಿ, ಕಾರ್ಕಳ ತಾಲೂಕಿನಲ್ಲಿಯೂ ಸಾಧಾರಣ ಮಳೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next