Advertisement

ರಾಜ್ಯದ ಕೆಲವೆಡೆ ಸಾಧಾರಣ ಮಳೆ

11:17 PM Jun 16, 2019 | Lakshmi GovindaRaj |

ಬೆಂಗಳೂರು/ಮಂಗಳೂರು: ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವೆಡೆ ಭಾನುವಾರ ಬಿಸಿಲಿನ ವಾತಾವರಣ ಇತ್ತು. ಕೆಲವೆಡೆ ಸಾಧಾರಣದಿಂದ ತುಂತುರು ಮಳೆಯಾಗಿದೆ. ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಸುಬ್ರಹ್ಮಣ್ಯ, ಕಾರ್ಕಳ ಮತ್ತು ಗೇರುಸೊಪ್ಪಾದಲ್ಲಿ ರಾಜ್ಯದಲ್ಲಿಯೇ ಅಧಿಕ, 3 ಸೆಂ.ಮೀ.ಗಳಷ್ಟು ಮಳೆ ಸುರಿಯಿತು.

Advertisement

ಮಂಗಳವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ದಕ್ಷಿಣ ಒಳನಾಡಿನ ಕೆಲವೆಡೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next