Advertisement
ಅವರ ಮಾಸಿಕ ಮನ್ ಕಿ ಬಾತ್ ನಲ್ಲಿ ಮಾತನಾಡಿದ ಅವರು, ಕೃಷಿ ವಲಯಗಳ ಭವಿಷ್ಯದ ಬಗ್ಗೆ ಮಾತನಾಡಿದರು.
Related Articles
Advertisement
ಕೃಷಿ ವಲಯದಲ್ಲಿ ಉದ್ಯೋಗವಕಾಶಗಳನ್ನು ಹೆಚ್ಚಿಸುವ ಸಲುವಾಗಿ, ಕೃಷಿಕರ ಆದಾಯವನ್ನು ಹೆಚ್ಚಿಸಲು, ಸಾಂಪ್ರದಾಯಿಕ ಕೃಷಿ ಪದ್ಧತಿಗಳ ಜೊತೆಗೆ ಆಧುನೀಕರಣ ಪರ್ಯಾಯಗಳನ್ನು, ಹೊಸ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವುದು ಕೂಡ ಮುಖ್ಯ ಎಂದರು.
ಶ್ವೇತ ಕ್ರಾಂತಿಯ ಸಂದರ್ಭದಲ್ಲಿ ದೇಶವು ಇದಕ್ಕೆ ಸಾಕ್ಷಿಯಾಗಿದೆ. ಜೇನುನೊಣ ಸಾಕಾಣಿಕೆ ಅಂತಹ ಒಂದು ಪರ್ಯಾಯವಾಗಿ ಹೊರಹೊಮ್ಮುತ್ತಿದೆ ಎಂದು ಅವರು ಅಭಿಪ್ರಾಯ ಪಟ್ಟರು.
ಇನ್ನು, ದೇಶದ ಕೋವಿಡ್ 19 ಸೋಂಕಿನ ವಿರುದ್ಧವಾಗಿ ವಿಶ್ವದಲ್ಲೇ ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವ ಲಸಿಕೆ ಆಂದೋಲನದ ಬಗ್ಗೆ ಅವರು ಒತ್ತಿ ಹೇಳಿದ್ದಾರೆ.
ದೇಶದಲ್ಲಿ ಕೋವಿಡ್ 19 ನ ರೂಪಾಂತರಿ ಅಲೆಯ ಕಾರಣದಿಂದ ದಿನ ನಿತ್ಯ ಹೆಚ್ಚುತ್ತಿರುವ ಸೋಂಕಿನ ಪ್ರಕರಣಗಳ ಬಗ್ಗೆ ಎಚ್ಚರಿಕೆ ನೀಡಿರುವ ಅವರು, ಔಷಧಿಗಳ ಜೊತೆಜೊತೆಗೆ ಕಟ್ಟು ನಿಟ್ಟಿನ ಕಠಿಣವಾದ ಕ್ರಮಗಳ(ದವಾಯಿ ಭಿ, ಕಡೈ ಭಿ) ಬಗ್ಗೆಯೂ ಮುಖ್ಯ ಎಂದು ಹೇಳಿದ್ದಾರೆ.
ಓದಿ : ಭಾವನಾತ್ಮಕತೆಯ ಬದುಕನ್ನು ತೇಲಿಸಿದ ‘ಹಿನ್ನೀರ ಅಲೆಗಳು’