Advertisement

ದೇಶಕ್ಕೆ ಮತ್ತೂಮ್ಮೆ ಮೋದಿ ಸಂಕಲ್ಪ: ಸುನಿಲ್‌

12:58 PM Mar 31, 2019 | keerthan |

ಬೆಳ್ತಂಗಡಿ: ಸಮಾಜದಲ್ಲಿ ಎಲ್ಲ ಸ್ಥರದ ಜನರ ಅಭಿವೃದ್ಧಿಗೆ ನಾನಾ ತರಹದ ಯೋಜನೆ ನೀಡಿರುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರಕಾರ ಮತ್ತೂಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಸುನಿಲ್‌ ಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಗುರುವಾಯಕೆರೆಯ ಗುಣವತಿ ಕಿನ್ಯಮ್ಮ ಸಭಾಂಗಣದಲ್ಲಿ ಶನಿವಾರ ನಡೆದ
ಬಿಜೆಪಿ ಪೇಜ್‌ ಪ್ರಮುಖ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ಮೋದಿ ಎದೆಗಾರಿಕೆ
54 ಇಂಚಿನ ಎದೆಗಾರಿಕೆ ಎಂದು ಕಾಂಗ್ರೆಸ್‌ ಮೋದಿಯನ್ನು ಟೀಕಿಸುತ್ತದೆ. ಆದರೆ ಈ ವರೆಗೆ ಭಯೋತ್ಪಾದನೆ ಮಟ್ಟಹಾಕುವಲ್ಲಿ ಕಾಂಗ್ರೆಸ್‌ ಸರಕಾರ ತೋರದ ಎದೆಗಾರಿಕೆಯನ್ನು ಮೋದಿ ಪ್ರದರ್ಶಿಸಿದ್ದಾರೆ ಎಂದರು. ಬೆಳ್ತಂಗಡಿಯ ಶಾಸಕರು ಐದು ವರ್ಷಗಳಲ್ಲಿ ಮಾದರಿ ಬೆಳ್ತಂಗಡಿ ಮಾಡುವ ಗುರಿ ಹೊಂದಿದ್ದಾರೆ. ಕಾರ್ಯಕರ್ತರೆಲ್ಲರು ಶ್ರಮಿಸಿ ಕೇಂದ್ರದಲ್ಲಿ ಮತ್ತೆ ಬಿಜೆಪಿ ಆಡಳಿತಕ್ಕೆ ಬರುವಂತೆ ಮಾಡಬೇಕು ಎಂದರು.

ಅಭಿವೃದ್ಧಿಯ ಹರಿಕಾರ ನರೇಂದ್ರ ಮೋದಿ ಗೆಲ್ಲಿಸುವಲ್ಲಿ ಚೌಕಿದಾರ್‌ ಆಗಿ ಸೇವೆ ಸಲ್ಲಿಸುತ್ತೇನೆ. ಈ ದೇಶಕ್ಕೆ ಮತ್ತೂಮ್ಮೆ ಪ್ರಧಾನಿಯಾಗಿಸುವ ನಿಟ್ಟಿನಲ್ಲಿ ಗ್ರಾಮ ಗ್ರಾಮಗಳಲ್ಲಿ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಸಂಕಲ್ಪ ತೊಟ್ಟಿದ್ದಾರೆ ಎಂದು ಹಾಲಿ ಸಂಸದರು ಹಾಗೂ ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಶಾಸಕ ಹರೀಶ್‌ ಪೂಂಜಾ ಪ್ರಸ್ತಾವನೆಗೈದರು. ಮಂಡಲ ಅಧ್ಯಕ್ಷ ಜಯಂತ್‌ ಕೊಟ್ಯಾನ್‌ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಮೋನಪ್ಪ ಭಂಡಾರಿ, ಪ್ರತಾಪ್‌ ಸಿಂಹ ನಾಯಕ್‌, ಕೋಟ ಶ್ರೀನಿವಾಸ ಪೂಜಾರಿ, ಸಂಜೀವ ಮಠಂದೂರು, ರಾಜೇಶ್‌ ನಾಯ್ಕ ಉಳೆಪ್ಪಾಡಿ, ಕ್ಯಾ| ಗಣೇಶ್‌ ಕಾರ್ಣಿಕ್‌, ಬೃಜೇಶ್‌ ಚೌಟ, ಪ್ರಭಾಕರ ಬಂಗೇರ ಮೊದಲಾದವರು ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next