Advertisement

ಆಪರೇಷನ್ ಗಂಗಾ ಯಶಸ್ಸಿಗೆ ಭಾರತದ ಹೆಚ್ಚುತ್ತಿರುವ ಪ್ರಭಾವ ಕಾರಣ: ಪ್ರಧಾನಿ ಮೋದಿ

04:23 PM Mar 06, 2022 | Team Udayavani |

ಪುಣೆ : ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರಿಸುವ ”ಆಪರೇಷನ್ ಗಂಗಾ”ದ ಯಶಸ್ಸಿಗೆ ಜಾಗತಿಕ ರಂಗದಲ್ಲಿ ಹೆಚ್ಚುತ್ತಿರುವ ಭಾರತದ ಪ್ರಭಾವವೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.

Advertisement

“ಅನೇಕ ದೊಡ್ಡ ದೇಶಗಳು ತಮ್ಮ ನಾಗರಿಕರಿಗೆ ಹಾಗೆ ಮಾಡಲು ತೊಂದರೆಗಳನ್ನು ಎದುರಿಸುತ್ತಿವೆ. ಆಪರೇಷನ್ ಗಂಗಾ ಮೂಲಕ ನಾವು ಸಾವಿರಾರು ಭಾರತೀಯರನ್ನು ಯುದ್ಧ ವಲಯದಿಂದ ಸುರಕ್ಷಿತವಾಗಿ ಸ್ಥಳಾಂತರಿಸುತ್ತಿದ್ದೇವೆ” ಎಂದು ಸಿಂಬಯಾಸಿಸ್ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಆಚರಣೆಯನ್ನು ಉದ್ಘಾಟಿಸಿ ಮಾತನಾಡುವ ವೇಳೆ ಪ್ರಧಾನಿ ಮೋದಿ ಹೇಳಿದ್ದಾರೆ.

ಉಕ್ರೇನ್‌ನಲ್ಲಿ ಉಲ್ಬಣಗೊಳ್ಳುತ್ತಿರುವ ಬಿಕ್ಕಟ್ಟಿನ ಮಧ್ಯೆ, ಭಾರತ ಸರ್ಕಾರವು ಆಪರೇಷನ್ ಗಂಗಾ ಅಡಿಯಲ್ಲಿ ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದ 13,700 ನಾಗರಿಕರನ್ನು ಕಳೆದ ವಾರ ಪ್ರಾರಂಭಿಸಿದ ವಿಶೇಷ ವಿಮಾನಗಳಲ್ಲಿ ಸುರಕ್ಷಿತವಾಗಿರಿಸಿದೆ ಎಂದು ಸರ್ಕಾರ ಶನಿವಾರ ಹೇಳಿಕೆಯಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next