Advertisement

ಪೆಸಿಫಿಕ್‌ ವಲಯದಲ್ಲಿ ಶಾಂತಿಗೆ ಬದ್ಧ: ಮೋದಿ

07:44 AM Nov 16, 2018 | Team Udayavani |

ಸಿಂಗಾಪುರ: ಇಂಡೋ ಪೆಸಿಫಿಕ್‌ ವಲಯದಲ್ಲಿ ಶಾಂತಿ ನೆಲೆಸುವ ಕ್ರಮಗಳನ್ನು ಕೈಗೊಳ್ಳಲು ಭಾರತ ಬದ್ಧವಾಗಿದೆ ಎಂದು ಸಿಂಗಾಪುರದಲ್ಲಿ ನಡೆಯುತ್ತಿರುವ ಪೂರ್ವ ಏಷ್ಯಾ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪೂರ್ವ ಏಷ್ಯಾ ದೇಶಗಳೊಂದಿಗೆ ಭಾರತ ಆರ್ಥಿಕ ಮತ್ತು ಸಾಂಸ್ಕೃತಿಕ ಸಂಬಂಧವನ್ನು ಹೊಂದಿದೆ. ಪೂರ್ವ ಏಷ್ಯಾ ದೇಶಗಳ ಒಕ್ಕೂಟ ದಲ್ಲಿ 10 ದೇಶಗಳಿದ್ದು, 2005 ರಿಂದಲೂ ಭಾರತ ಸಮ್ಮೇಳನದಲ್ಲಿ ಭಾಗವಹಿಸುತ್ತಿದೆ. ಇದಕ್ಕೂ ಮುನ್ನ ಬೆಳಗ್ಗೆ ಆಸಿಯಾನ್‌- ಇಂಡಿಯಾ ಬ್ರೇಕ್‌ಫಾಸ್ಟ್‌ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ 10 ಆಸಿಯಾನ್‌ ಮುಖಂಡರ ಜೊತೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದಾರೆ. 

Advertisement

ಪ್ರಶಸ್ತಿ ವಿತರಣೆ: ಕಳೆದ ಜೂನ್‌ನಲ್ಲಿ ಸಿಂಗಾಪುರಕ್ಕೆ ಭೇಟಿ ನೀಡಿದಾಗ ಭಾರತ-ಸಿಂಗಾಪುರ ಜಂಟಿ ಹ್ಯಾಕಥಾನ್‌ ನಡೆಸುವ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದರು. ಇದಕ್ಕೆ ಒಪ್ಪಿಕೊಂಡ ಸಿಂಗಾಪುರ ಪ್ರಧಾನಿ ಲೀ ಸೀನ್‌, ಹ್ಯಾಕಥಾನ್‌ ನಡೆಸಿದ್ದರು. ಈ ಸ್ಪರ್ಧೆಯಲ್ಲಿ ವಿಜೇತ ಭಾರತದ ಎರಡು ಹಾಗೂ ಸಿಂಗಾಪುರದ ನಾಲ್ಕು ತಂಡಗಳಿಗೆ ಪ್ರಧಾನಿ ಮೋದಿ ಗುರುವಾರ ಪ್ರಶಸ್ತಿ ಪ್ರದಾನ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next