Advertisement

ವಾರಾಣಸಿಯಿಂದಲೇ ಮೋದಿ ಕಣಕ್ಕೆ?

12:30 AM Jan 25, 2019 | Team Udayavani |

ಹೊಸದಿಲ್ಲಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ದೇಗುಲಗಳ ನಗರಿಯಲ್ಲೇ ಅದೃಷ್ಟ ಪರೀಕ್ಷೆಗಿಳಿಯಲಿದ್ದಾರೆ. 2014ರಂತೆಯೇ ಈ ಬಾರಿಯೂ ಅವರು ವಾರಾಣಸಿಯಲ್ಲೇ ಕಣಕ್ಕಿಳಿಯಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಆದರೆ, ಕಳೆದ ಬಾರಿ ವಡೋದರಾವನ್ನು ಎರಡನೇ ಕ್ಷೇತ್ರವಾಗಿ ಆಯ್ಕೆ ಮಾಡಿಕೊಂಡಿದ್ದ ಮೋದಿ ಅವರು, ಈ ಬಾರಿ ಅಲ್ಲಿ ಸ್ಪರ್ಧಿಸುತ್ತಾರೋ, ಇಲ್ಲವೋ ಎಂಬುದು ಇನ್ನೂ ದೃಢಪಟ್ಟಿಲ್ಲ. ಅದು ಬಿಜೆಪಿ ಚುನಾವಣಾ ಪ್ರಚಾರದ ಪ್ರಗತಿಯನ್ನು ಅವಲಂಬಿಸಿದೆ ಎಂದೂ ಮೂಲಗಳು ಹೇಳಿವೆ.ಈ ಬೆಳವಣಿಗೆಯ ನಡುವೆಯೇ, ಉತ್ತರಪ್ರದೇಶ(ಪೂರ್ವ) ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಪ್ರಿಯಾಂಕಾ ವಾದ್ರಾ ಅವರನ್ನು ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿಸಬೇಕು ಎಂದು ವಾರಾಣಸಿಯ ಕಾಂಗ್ರೆಸ್‌ ಘಟಕವು ಹೈಕಮಾಂಡ್‌ಗೆ ಬೇಡಿಕೆಯಿಟ್ಟಿದೆ. ಅಲ್ಲದೆ, “ಕಾಶಿ ಕಿ ಜನತಾ ಕರೆ ಪುಕಾರ್‌, ಪ್ರಿಯಾಂಕಾ ಗಾಂಧಿ ಹೋ ಸಂಸದ್‌ ಹಮಾರ್‌’ ಎಂದು ಘೋಷಣೆಗಳನ್ನು ಕೂಗುತ್ತಾ ಕಾಂಗ್ರೆಸ್‌ ಕಾರ್ಯಕರ್ತರು ಗುರುವಾರ ರ್ಯಾಲಿಯನ್ನೂ ನಡೆಸಿದ್ದಾರೆ. 

Advertisement

ಹಿಂದಿನ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರು ವಾರಾಣಸಿಯಲ್ಲಿ ಬರೋಬ್ಬರಿ 3.37 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದ್ದರು. ಅವರ ವಿರುದ್ಧ ಕಣಕ್ಕಿಳಿದಿದ್ದ ಆಮ್‌ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಅವರು 1.79 ಲಕ್ಷ ಮತಗಳನ್ನು ಪಡೆದಿದ್ದರು. ಕಾಂಗ್ರೆಸ್‌, ಎಸ್‌ಪಿ ಹಾಗೂ ಬಿಎಸ್‌ಪಿ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next