Advertisement

ಮೋದಿಗೆ ಪರ್ಯಾಯ ನಾಯಕರಿಲ್ಲ: ಜಿಟಿಡಿ

07:00 AM Nov 20, 2018 | Team Udayavani |

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೇಶದಲ್ಲಿ ಪರ್ಯಾಯ ನಾಯಕ ಬರಲಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ತಿಳಿಸಿದರು. 

Advertisement

ಚಿಕ್ಕಬಳ್ಳಾಪುರದ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ಯುವ ಸಮಾವೇಶಕ್ಕೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ದೇಶದಲ್ಲಿ ಮೋದಿಗೆ ಪ್ರಬಲ ಎದುರಾಳಿಯಾಗಿ ಪರ್ಯಾಯ ನಾಯಕರು ಯಾರು ಸಹ ಕಾಣುತ್ತಿಲ್ಲ. ಆದರೂ ಕೇಂದ್ರ ಸರ್ಕಾರ ಕಳೆದ ನಾಲ್ಕೂವರೆ ವರ್ಷದಲ್ಲಿ ಗ್ರಾಮೀಣ ಜನರನ್ನು ತೀವ್ರ ಸಂಕಷ್ಟಕ್ಕೆ ತಳ್ಳಿದೆ. ಅವರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲ ಎಂದು ಟೀಕಿಸಿದರು.

ದಲಿತ ಮುಖ್ಯಮಂತ್ರಿ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಎಂದೋ ದಲಿತರು ಮುಖ್ಯಮಂತ್ರಿ ಆಗಬೇಕಿತ್ತು. ರಾಜ್ಯ, ದೇಶದಲ್ಲಿ ದಲಿತ ಸಮಾಜ ದೊಡ್ಡದಾಗಿದೆ. ಪರಮೇಶ್ವರ್‌ ಅಥವಾ ಮಲ್ಲಿಕಾರ್ಜುನ ಖರ್ಗೆ ಇಬ್ಬರಲ್ಲಿ ಯಾರಾದರೊಬ್ಬರು ರಾಜ್ಯದ ಮುಖ್ಯಮಂತ್ರಿ ಆಗಬೇಕಿತ್ತು ಎಂದರು.

ಖಾತೆ ಬದಲಾವಣೆಗೆ ಉತ್ತರಿಸಿ, ಯಾವುದೇ ಕಾರಣಕ್ಕೂ ನನ್ನ ಖಾತೆ ಬದಲಾಗುವುದಿಲ್ಲ. ಉನ್ನತ ಶಿಕ್ಷಣ ಇಲಾಖೆಯಲ್ಲಿ ಬದಲಾವಣೆ ಮಾಡಿ ತೋರಿಸುವೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next