Advertisement

ಬೀದರ್: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಶನಿವಾರ ಬಸವ ಭೂಮಿ ಬೀದರ್ ಜಿಲ್ಲೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಚುನಾವಣೆ ರಣಕಹಳೆ ಮೊಳಗಿಸಿದ್ದಾರೆ.

Advertisement

ಹುಮನಾಬಾದ ಸಮೀಪದ ಚಿನಕೇರಾ ಕ್ರಾಸ್ ಬಳಿ ಬೃಹತ್ ಸಾರ್ವಜನಿಕ ಸಭೆಯ ಸಭೆಯನ್ನು ಉದ್ದೇಶಿಸಿ ಮಾತನಾಡುವ ಮೂಲಕ‌ ಬೀದರ ಜಿಲ್ಲೆಯ ಆರು ಮತ್ತು ಕಲ್ಬುರ್ಗಿ ಜಿಲ್ಲೆಯ ಮೂರು ಸೇರಿ ಒಂಬತ್ತು ಕ್ಷೇತ್ರಗಳ ಬಿಜೆಪಿ‌ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಮಾಡಿದರು.

ನವದೆಹಲಿಯಿಂದ ವಿಶೇಷ ವಿಮಾನ ಮೂಲಕ ಬೆಳಗ್ಗೆ 10.20ಕ್ಕೆ ಬೀದರ ವಾಯುನೆಲೆ ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಚಿನಕೇರಾ ಕ್ರಾಸ್ ಬಳಿ ಸ್ಥಾಪಿಸಿದ ಬೃಹತ್ ವೇದಿಕೆಯಲ್ಲಿ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು.

ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಭಗವಂತ ಖೂಬಾ ಅವರು ಸಾಥ್ ನೀಡಿದರು. ಬೀದರ ಲೋಕಸಭಾ ಕ್ಷೇತ್ರದ 8 ಮತ್ತು ಕಲ್ಬುರ್ಗಿ ಗ್ರಾಮಾಂತರ ಕ್ಷೇತ್ರಗಳಿಂದ ಎರಡು ಲಕ್ಷಕ್ಕೂ‌ ಅಧಿಕ ಕಾರ್ಯಕರ್ತರು ಭಾಗವಹಿಸಿದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next