Advertisement

ಉಡುಪಿ ಭೋಜನ ಸವಿದ ಮೋದಿ

12:49 AM Aug 04, 2023 | Team Udayavani |

ಉಡುಪಿ: ಎಲ್ಲೆಡೆ ಪ್ರಸಿದ್ಧಿ ಪಡೆದಿರುವ ಉಡುಪಿ ಅಡುಗೆ ಈಗ ದೇಶದ ಶಕ್ತಿ ಕೇಂದ್ರ ಸಂಸತ್ತಿನಲ್ಲಿ ಘಮಘಮಿಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಾಳೆ ಎಲೆಯಲ್ಲಿ ಬಡಿಸಿದ ಉಡುಪಿ ಸಾರು, ಪತ್ರೊಡೆ, ಸುಕ್ರುಂಡೆ, ಹಲಸಿನ ಹಣ್ಣಿನ ಗಟ್ಟಿ, ತಿಮರೆ ಚಟ್ನಿ ಮೊದಲಾದ ಖಾದ್ಯ ಸಹಿತ ಆಂಧ್ರ, ತಮಿಳುನಾಡಿನ ಕೆಲವು ಖಾದ್ಯಗಳನ್ನೊಳಗೊಂಡ ಬಗೆಬಗೆಯ ತಿನಿಸುಗಳ ಭೋಜನವನ್ನು ಸವಿದು ಟ್ವೀಟ್‌ ಮಾಡಿರುವುದು ವಿಶೇಷವಾಗಿದೆ.

Advertisement

ಗುರುವಾರ ಸಂಸತ್‌ ಭವನದ ಒಳಾಂಗಣದಲ್ಲಿ ನಡೆದ ಎನ್‌ಡಿಎ ಸಂಸದರ ಸಭೆಯ ಅನಂತರ ಏರ್ಪಡಿಸಿದ್ದ ಭೋಜನಕೂಟಕ್ಕೆ ಉಡುಪಿಯ ಬುಡ್ನಾರು ಸುಬ್ರಹ್ಮಣ್ಯ ಆಚಾರ್ಯ ಅವರು ದಿಲ್ಲಿಗೆ ತೆರಳಿ ಉಡುಪಿ ಅಡುಗೆಯನ್ನು ಸಿದ್ಧಪಡಿಸಿ, ಊಟವನ್ನೂ ಬಡಿಸಿದ್ದರು. ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ, ನಿತಿನ್‌ ಗಡ್ಕರಿ, ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಎಲ್ಲರೂ ಉಡುಪಿ ಅಡುಗೆಯ ಸವಿಯುಂಡರು. ಸುಬ್ರಹ್ಮಣ್ಯ ಅವರ ಜತೆ ಸಹಾಯಕರಾಗಿ ರಾಜಶೇಖರ್‌ ತೆರಳಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next